ನಾಳೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ

187
Share

Final Invitation (1)

*ನಾಳೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ*

ಮೈಸೂರು. ಜೂನ್ – ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ 75 ನೇ ಸ್ವಾತಂತ್ರ‍್ಯ ಮಹೋತ್ಸವ ಅಂಗವಾಗಿ 2022 ರ ಜೂನ್ 25 ರ ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ರಾಮಸ್ವಾಮಿ ವೃತ್ತ ಹಾಗೂ ಸುಬ್ಬರಾಯನ ಕೆರೆ ಮೈದಾನದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಕಾರ್ಯಕ್ರಮ ವನ್ನು ಉದ್ಘಾಟಿಸುವರು.

*ನಾಳೆ ಬೆಳಿಗ್ಗೆ 10 ಗಂಟೆಗೆ ರಾಮಸ್ವಾಮಿ ವೃತ್ತದಲ್ಲಿ ಶಿಲಾಫಲಕ ಅನಾವರಣ ಮಾಡುವರು. ಬೆಳಿಗ್ಗೆ 10.30 ಗಂಟೆಗೆ ರಾಮಸ್ವಾಮಿ ವೃತ್ತದಿಂದ ನಾಲ್ಕು ದಿಕ್ಕಿನಿಂದ ಕಲಾ ತಂಡಗಳು, ನೃತ್ಯ ಪಟುಗಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನೊಳಗೊಂಡAತೆ ಸುಬ್ಬರಾಯ ಕೆರೆ ಮೈದಾನದತ್ತ ಮೆರವಣಿಗೆ ಮಾಡಲಾಗುವುದು ಹಾಗೂ ವೇದಿಕೆ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಸುಬ್ಬರಾಯನ ಕೆರೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ*

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಎಸ್.ಎ.ರಾಮದಾಸ್ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾ ಪೌರರಾದ ಸುನಂದಾ ಪಾಲನೇತ್ರ, ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಚಾಮರಾಜನಗರ ಲೋಕಸಭಾ ಸದಸ್ಯರಾದ ವಿ. ಶ್ರೀನಿವಾಸ್ ಪ್ರಸಾದ್, ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಷ್ ಅವರು ಭಾಗವಹಿಸುವರು. ಹಾಗೂ ವಿಧಾನ ಪರಿಷತ್ ಮತ್ತು ವಿಧಾನ ಸಭೆ ಶಾಸಕರು, ನಿಗಮ ಮಂಡಳಿಯ ಅಧ್ಯಕ್ಷರುಗಳು ಉಪಸ್ಥಿತರಿರುವರು.


Share