ಬೆಂಗಳೂರು ಕೊರೋನಾ ಸಂಬಂಧ ನಡೆದಿರುವ ಭ್ರಷ್ಟಾಚಾರ ಹಾಗೂ ವ್ಯವಸ್ಥೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ ಗಳನ್ನು ಸುರಿಸಿದ್ದಾರೆ
ರಾಜ್ಯ ಸರ್ಕಾರದ ಆಡಳಿತ ವರ್ತನೆ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಕಿಡಿಕಾರಿದ್ದಾರೆ.
ಸಾಮಾನ್ಯ ರೈತರನ್ನು ನಾಶಮಾಡುವ ಭೂಸುಧಾರಣ ತಿದ್ದುಪಡಿ ಕಾಯ್ದೆ ಆಗಿದೆ ಎಂದು ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.
ರೈತರ ಜಮೀನು ಕಾರ್ಪೊರೇಟ್ ಪಾಲಾಗಲಿದೆ, ದುಡ್ಡಿದ್ದವರಿಗೆ ಕೃಷಿ, ಜಮೀನು ತೆಗೆದುಕೊಳ್ಳಲು ಭೂ ಸುಧಾರಣೆ ಕಾಯ್ದೆ ಕಾಯ್ದೆಯಿಂದ ಅವಕಾಶ ಮಾಡಿಕೊಡಲಾಗಿದೆ. ಸಿದ್ದರಾಮಯ್ಯನವರು ವಾಗ್ದಾಳಿ ನಡೆಸಿದ್ದಾರೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಇಂದ ಆಹಾರ ಉತ್ಪಾದನೆ ಕ್ಷೇತ್ರಕ್ಕೆ ಹೊಡೆತ ಬೀಳಲಿದೆ ಎಂದು ಅವರು ತಿಳಿಸಿದರು