ಬೈಲನರಸಾಪುರ ಹೋಂ ಕ್ವಾರಂಟೈನ್ ತೆರವು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 14 (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮವನ್ನು ಹೋಂ ಕ್ವಾರಂಟೈನ್ ನಿಂದ ತೆರವು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಪಿ.ಎನ್.ರವೀಂದ್ರ ಅವರು ಆದೇಶಿಸಿದ್ದಾರೆ. ಬೈಲನರಸಾಪುರ ಗ್ರಾಮದಲ್ಲಿ ನಾಲ್ಕು ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆ ಗ್ರಾಮವನ್ನು ಹೋಂ ಕ್ವಾರಂಟೈನ್ ಮಾಡಲಾಗಿತ್ತು. ಏಪ್ರಿಲ್ 10 ರಿಂದ ಮೇ 08 ರವರೆಗೆ ಬೈಲನರಸಾಪುರ ಗ್ರಾಮದಲ್ಲಿ ಯಾವುದೇ ಕೋವಿಡ್-19 ಪ್ರಕರಣ ದೃಢಪಡದಿರುವುದರಿಂದ, ಗ್ರಾಮವನ್ನು ಹೋಂ ಕ್ವಾರಂಟೈನ್ ನಿಂದ ತೆರವುಗೊಳಿಸಿ ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿಕಲಚೇತನರು ಸಮಾಜಕ್ಕೆ ಹೊರೆ ಅಲ್ಲ*
*4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು, ಡಿಸೆಂಬರ್ 3: 2023-24ನೇ ಸಾಲಿನಲ್ಲಿ 4000 ವಿಶೇಷ ಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ಕ್ರಮ...