ಜಿಲ್ಲಾ ಉಸ್ತುವಾರಿ ಸಚಿವರ ಇಂದಿನ ಕಾರ್ಯಕ್ರಮ

ಮಾನ್ಯ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜೂನ್ 5 ಶುಕ್ರವಾರದ ಕಾರ್ಯಕ್ರಮಗಳು

  1. ಬೆಳಗ್ಗೆ 9.30: ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಒಂದು ವರ್ಷದ ಸಾಧನೆಯ ಮಾಹಿತಿ ಪತ್ರವನ್ನು ಮನೆಮನೆಗೆ ಹಂಚುವ ಕಾರ್ಯಕ್ರಮಕ್ಕೆ ಚಾಲನೆ, ಸ್ಥಳ: ನಟರಾಜ ಚಿತ್ರಮಂದಿರದ ಎದುರು, ಶಂಕರಮಠ ರಸ್ತೆ, ಅಗ್ರಹಾರ, ಉಲ್ಲೇಖ: ಮಾನ್ಯ ಶಾಸಕರಾದ ಎಸ್.ಎ ರಾಮದಾಸ್ ಅವರು
  2. ಬೆಳಗ್ಗೆ 10.30: ಮೈಸೂರಿನ ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರಿ ಭಾರತೀ ತೀರ್ಥ ಮಹಾಸ್ವಾಮಿಗಳವರ ಉದ್ಯಾನವನ, ಜೆ.ಪಿ.ನಗರ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು, ಉಲ್ಲೇಖ ಜಿಲ್ಲಾಡಳಿತ
  3. ಬೆಳಗ್ಗೆ 11.30: ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಗವಾಗಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
  4. ಮಧ್ಯಾಹ್ನ 12: ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗಿ, ಸ್ಥಳ: ದೇವನೂರು 3ನೇ ಹಂತ, ಮುಡಾ ಪಾರ್ಕ್
  5. ಮಧ್ಯಾಹ್ನ 12.30: ಮೈಸೂರು ಜಿಲ್ಲೆಯ 2860 ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕಿಟ್ ಕೊಡಲು ತೀರ್ಮಾನಿಸಲಾಗಿದ್ದು, ಸಾಂಕೇತಿಕವಾಗಿ 100 ಜನ ಅಂಗನವಾಡಿ ಕಾರ್ಯಕರ್ತೆಯರಿಗೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ್ಥಳ: ಕಲಾಮಂದಿರ ಮೈಸೂರು