ದೇಶ ಕಟ್ಟುವ ಕಾಯಕಕ್ಕೆ ಅರ್ಪಿಸಿಕೊಂಡ ಪ್ರಧಾನಿ ಮೋದಿ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ಕಟ್ಟುವ ಕಾಯಕಕ್ಕೆ ಅರ್ಪಿಸಿಕೊಂಡವರು
-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಜೂನ್ 1:

ಕೇಂದ್ರದಲ್ಲಿ ದ್ವಿತೀಯ ಅವಧಿಯ ಪ್ರಥಮ ವರ್ಷ ಪೂರೈಸಿದ ಸರ್ಕಾರ ಹಾಗೂ ಅದ್ವಿತಿಯ ಸಾಧಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಯವರ ಸಾಧನೆಯ ಬಗ್ಗೆ ದೇಶದ ಜನರಿಂದ ಹಿಡಿದು ವಿಶ್ವದ ಅನೇಕ ದೇಶಗಳ ನಾಯಕರು ಮೆಚ್ಚಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಕೇಂದ್ರ ಸರ್ಕಾರದ ಪ್ರಥಮ ವರ್ಷಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ದೇಶ ಕಟ್ಟುವ ಕಾಯಕಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ವ್ಯಕ್ತಿತ್ವದ ಪ್ರಧಾನಿ ನರೇಂದ್ರ ಮೋದಿ ಜೀ. ಹಲವು ದಶಕಗಳಿಂದ ತುಕ್ಕು ಹಿಡಿದಿದ್ದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ತಂದವರು. ಆಡಳಿತದಲ್ಲಿ ಸುಧಾರಣೆ ತರಲು ಭ್ರಷ್ಠಾಚಾರಕ್ಕೆ ಕಡಿವಾಣ, ಕರ್ತವ್ಯ ನಿಷ್ಠೆ, ತಂತ್ರಜ್ಞಾನ ಅಳವಡಿಕೆ, ಪಾರದರ್ಶಕತೆ, ದೇಶದ ಸರಂಕ್ಷಣೆಗೆ ಆದ್ಯತೆ ಇವುಗಳನ್ನು ಅಳವಡಿಸಿಕೊಂಡು ಕಾಯಕ ಯೋಗಿಯಾಗಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಜೀ ಯವರು. ಪ್ರಥಮ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಪಡೆಯುವುದಕ್ಕೆ ಮೊದಲು ಸಂಸತ್ತಿನ ಭವನಕ್ಕೆ ನಮನ ಮಾಡಿ ಸಂವಿಧಾನವನ್ನು ಎತ್ತಿ ಹಿಡಿಯುವ ಸಂಕಲ್ಪ ಮಾಡಿದರು ಎಂದು ಹೇಳಿದರು.

ಮೊದಲನೆಯ ಸಂಸದರ ಸಭೆಯಲ್ಲಿ ಮೋದಿಯವರು ಭಾಷಣ ಮಾಡಿ ಮುಂದಿನ ಚುನಾವಣೆ ನನ್ನ ಸರ್ಕಾರದ ಸಾಧನೆಯ ಆಧಾರದಲ್ಲಿ ನಡೆಯಲಿದೆ ಎಂದು ಘೋಷಿಸಿದರು. ಅದರಂತೆ 5 ವರ್ಷದ ಆಡಳಿತದಲ್ಲಿ ನುಡಿದಂತೆ ನಡೆದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಜನತೆಗೆ ನೀಡಿದವರು ಪ್ರಧಾನಿ ನರೇಂದ್ರ ಮೋದಿ ಜೀ ಯವರು.ವರ್ಷದ ಆಡಳಿತದಲ್ಲಿ ಜನಧನ್ ಯೋಜನೆ, ಆಯುಷ್ಮಾನ್ ಭಾರತ್, ಜನರಿಕ್ ಔಷಧಿ ಮಳಿಗೆ, ಬೇವು ಮಿಶ್ರಿತ ರಸಗೊಬ್ಬರ ಬಳಕೆ, ಮುದ್ರಾ ಯೋಜನೆ, ಸ್ಟಾರ್ಟ್ ಆಫ್ ಇಂಡಿಯಾ, ಇತ್ಯಾದಿ ಹಲವಾರು ದೇಶದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಿದ ಸಾಧನೆಯನ್ನು ದೇಶದ 130 ಕೋಟಿ ಜನರ ಮುಂದೆ 2019 ಲೋಕಸಭಾ ಚುನಾವಣೆಯಲ್ಲಿ ಮಂಡಿಸಿ 2ನೇ ಅವಧಿಗೆ ಆಶೀರ್ವಾದ ಕೇಳಿದರು.

•ದೇಶದ ಜನತೆ ಮೋದಿಯವರ ಆಡಳಿತದಲ್ಲಿ ಪೂರ್ಣ ವಿಶ್ವಾಸವಿಟ್ಟು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಪ್ರಥಮವಾಗಿ 303 ಸ್ಥಾನಗಳನ್ನು ಎನ್ಡಿಎಗೆ 353 ಸ್ಥಾನಗಳನ್ನು ಲೋಕಸಭಾ ಸದಸ್ಯರನ್ನು ನೀಡಿ ಸ್ಥಿರ ಸರ್ಕಾರ ರಚಿಸಲು ಜನತೆ ಮೋದಿಯವರಿಗೆ ಆಶೀರ್ವಾದ ಮಾಡಿದರು. ಕರ್ನಾಟಕದಲ್ಲಿ ಸೋಲಿಲ್ಲದ ಸರದಾರರಾದ ಮಲ್ಲಿಕಾರ್ಜುನ ಖರ್ಗೆಯವರು, ಕೆ.ಹೆಚ್. ಮುನಿಯಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರಂತಹವರು ಸಹ ಪ್ರಧಾನಿ ನರೇಂದ್ರ ಮೋದಿಯವರ ಅಲೆಯಲ್ಲಿ ಸೋಲನ್ನು ಅನುಭವಿಸಿ, ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳು ಗೆಲುವಾಯಿತು. ನರೇಂದ್ರ ಮೋದಿ ಜೀ ಯವರು 2ನೇ ಅವಧಿಯ ಪ್ರಥಮದಲ್ಲಿ ದೇಶದ ಸುರಕ್ಷತೆ ಹಲವು ದಶಕಗಳಿಂದ ಉಳಿದಿದ್ದ ಸಮಸ್ಯೆಗಳ ಪರಿಹಾರಕ್ಕೆ ದೃಢ ಸಂಕಲ್ಪದ ಘೋಷಣೆ ಮಾಡಿದರು.

ದ್ವಿತೀಯ ಅವಧಿಯ ಆಡಳಿತದ ಪ್ರಾರಂಭದಲ್ಲಿಯೇ ಪ್ರಪಂಚದ ನಾಯಕರಲ್ಲಿ ಅಗ್ರಗಣ್ಯ ನಾಯಕರೆಂಬ ಹೆಸರಿಗೆ ಪಾತ್ರರಾಗಿ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವದಾಗಿದೆ. 2ನೇ ಅವಧಿಯ ಪ್ರಾರಂಭದಲ್ಲೆ ದೇಶದ ಪ್ರಜಾತಂತ್ರ ವ್ಯವಸ್ಥೆಯ ಚರಿತ್ರೆಯಲ್ಲಿ ಸುವರ್ಣ ಅಧ್ಯಾಯವನ್ನು ಪ್ರಾರಂಭಿಸಿದರು. ಹಲವಾರು ದಶಕಗಳಿಂದ ದೇಶದ ಜನತೆ ನಿರೀಕ್ಷಣೆ ಮಾಡಿದ್ದ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟಿನಿಂದ ತೀರ್ಪು ಪಡೆಯುವುದರಲ್ಲಿ ಪ್ರದಾನಿಯವರು ನಡೆಸಿದ ಕಾನೂನು ಸಮರ, ಸಹನೆ ಹಾಗೂ ಚಾಣಕ್ಯ ತಂತ್ರಗಾರಿಕೆಯನ್ನು ದೇಶದ ಜನತೆಯ ಪ್ರಶಂಸಿದ್ದಾರೆ.

   ದೇಶದ ಭದ್ರತೆಗಾಗಿ 3 ಸೇನೆಗೆ ಒಬ್ಬರೇ ದಂಡನಾಯಕನನ್ನು ನೇಮಿಸಿದ್ದು ದೇಶದ ರಕ್ಷಣೆಗೆ ನೀಡಿದ ಕೊಡುಗೆ.

ಶತ ಶತಮಾನಗಳಿಂದ ಆಚರಣೆಯಲ್ಲಿದ್ದ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದು ಮಾಡಿ ಮುಸ್ಲಿಂ ಸಮುದಾಯದಲ್ಲಿನ ಹೀನ ಸಂಪ್ರದಾಯಕ್ಕೆ ಮಂಗಳ ಹಾಡಿದರು. ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕಾಯ್ದೆಯನ್ನು ಜಾರಿ ಮಾಡಿ ಉಗ್ರರ ನಿಗ್ರಹಕ್ಕೆ ಮತ್ತು ಅವರ ಬೆಂಬಲಕ್ಕೆ ಇದ್ದ ಸವಲತ್ತುಗಳನ್ನು ನಿಗ್ರಹ ಮಾಡಿದರು.

ಸಣ್ಣ ಪುಟ್ಟ ಬ್ಯಾಂಕ್ಗಳನ್ನು ಸೇರಿಸಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ವಿಲೀನ ಮಾಡುವುದರ ಮೂಲಕ ಬ್ಯಾಂಕ್ ಗಳ ಸುಧಾರಣೆ ಮತ್ತು ವಸೂಲಾಗದ ಸಾಲಗಳಿಂದ ಬ್ಯಾಂಕುಗಳಿಗೆ ಮುಕ್ತಿ ಹಾಗೂ ಬ್ಯಾಂಕ್ ಗಳ ಅನಗತ್ಯ ವೆಚ್ಚವನ್ನು ತಗ್ಗಿಸಿದರು. ಕಂದಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಮಕ್ಕಳ ದೌರ್ಜನ್ಯ ಕಠಿಣ ಕಾಯ್ದೆ ರೂಪಿಸಿದರು.

ದೇಶದ ಏಕತೆಗಾಗಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನ ಮಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಕಾಶ್ಮೀರದ ಆಡಳಿತವನ್ನು ರಾಷ್ಟ್ರೀಯ ಆಡಳಿತಕ್ಕೆ ಒಳಪಡಿಸಿ ಸರ್ವತೋಮುಖ ಅಭಿವೃದ್ಧಿಗೆ ದಿಟ್ಟ ಹೆಜ್ಜೆಯನ್ನು ತೆಗೆದುಕೊಂಡ ಉಕ್ಕಿನ ನಾಯಕರು. ವಿದೇಶದಲ್ಲಿ ನೆಲೆ ಇಲ್ಲದ ನಿರಾಶ್ರಿತರಿಗೆ ಆಶ್ರಯ ನೀಡಲು ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಅಂಂ) ಮೂಲಕ ಅಭಯ ಹಸ್ತ ಚಾಚಿದ್ದಾರೆ. ದೇಶದ ವಿಭಜನೆ ಸಂದರ್ಭದಲ್ಲಿ ಭಾರತದಿಂದ ಅನಿವಾರ್ಯವಾಗಿ ನೆರೆ ರಾಷ್ಟ್ರಗಳಿಗೆ ವಲಸೆ ಹೋಗಿ ನಿರಾಶ್ರಿತರಾಗಿ ಭಾರತಕ್ಕೆ ಹಿಂದುರುಗಿದ ಭಾರತೀಯರಿಗೆ ಇದು ಜೀವ ರಕ್ಷಕ ಕಾಯ್ದೆಯಾಗಿದೆ.