ಮಹಿಳೆಯರಲ್ಲಿ ಈಗ ಸೌಂದರ್ಯಪ್ರಜ್ಞೆ ಹೆಚ್ಚುತ್ತಿದ್ದು : ಆರ್ ಎಚ್ ಪವಿತ್ರ
ಮಹಿಳೆಯರಲ್ಲಿ ಈಗ ಸೌಂದರ್ಯಪ್ರಜ್ಞೆ ಹೆಚ್ಚುತ್ತಿದ್ದು,
ಬ್ಯೂಟಿಷಿಯನ್ ಮತ್ತು ಹೋಲಿಗೆ ವೃತ್ತಿಗೆ ಸಮಾಜದಲ್ಲಿ ಉತ್ತಮ ಅವಕಾಶಗಳು ದೊರೆಯುತ್ತೀವೆ ಎಂದು : ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಂಶುಪಾಲರಾದ ಡಾಕ್ಟರ್ ಆರ್ ಎಚ್ ಪವಿತ್ರ
ಮೈಸೂರು: ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ವಿಶ್ವ ಬ್ಯೂಟಿಷಿಯನ್ ದಿನದ ಅಂಗವಾಗಿ ಶ್ರೀ ದುರ್ಗಾ ಫೌಂಡೇಶನ್ ಹಾಗೂ ಶಿವಮೊಗ್ಗ ಬ್ಯೂಟಿಷಿಯನ್ ಅಸೋಸಿಯೇಷನ್ ವತಿಯಿಂದ 20 ವರ್ಷದಿಂದ ಬ್ಯೂಟಿಷಿಯನ್ ವೃತ್ತಿಯನ್ನು ಮಾಡುತ್ತಾ ಬಂದಿರುವ ಹಿರಿಯ ಬ್ಯೂಟಿಷಿಯನ್ ಗಳಾದ ಮಾಲತಿ,ವಿನುತಾ ಆರ್.
ಚೈತ್ರ ಮಹೇಶ್ ,
ಟಿ.ಎನ್.ಗಂಗಾಂಬಿಕಾ,
ಸುಮ ನಾಯ್ಡು, ರವರಿಗೆ ಸನ್ಮಾನಿಸಲಾಯಿತು ನಂತರ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಅವರು
ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲು ಸಾಧ್ಯವಿಲ್ಲ , ಹೀಗಾಗಿ ಸ್ವ- ಉದ್ಯೋಗ ಪ್ರಾರಂಭಿಸಿ , ಸಮಾಜದ ಇನ್ನಷ್ಟು ಮಂದಿಗೆ ಉದ್ಯೋಗ ನೀಡುವ ಮೂಲಕ ಮಾದಿರೆಯಾಗಿರಬೇಕು, ಹೆಣ್ಣು ಮಕ್ಕಳಿಗೆ ತಾನು ಸುಂದರವಾಗಿರಬೇಕೆನ್ನುವ ಹಂಬಲವಿದೆ, ದೇವರು ಕೊಟ್ಟ ನಮ್ಮ ರೂಪಕ್ಕೆ ಮೆರುಗು ಕೊಡುವ ಕೆಲಸ ಬ್ಯೂಟಿ ಪಾರ್ಲರ್ ಗಳ ಮೂಲಕ ನಡೆಯುತ್ತಿದೆ , ತಾನು ಕಲಿತ ವಿದ್ಯೆಯನ್ನು ಆಧರಿಸಿ ಸ್ವ ಉದ್ಯೋಗ ಆರಂಭಿಸಿರುವ ಮಹಿಳೆಯರ ಸಾಧನೆಯನ್ನು ಸ್ಲಾಗಿಸಿದರು,
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿವಮೊಗ್ಗ ಅಸೋಸಿಯೇಷನ್ ಬ್ಯೂಟಿಷಿಯನ್ ಅಧ್ಯಕ್ಷರಾದ ಅಶ್ವಿನಿ ಪಿ ಗೌಡ ಮಹಿಳೆಯರು ಸಹ ಬ್ಯೂಟಿಷಿಯನ್ ಕೇಂದ್ರಗಳನ್ನು ತೆರೆದು ಮಹಿಳೆಯರುಮತ್ತು ಮಕ್ಕಳಿಗೆ ಕೇಶ ವಿನ್ಯಾಸ- ಮೆಹಂದಿ ಹಾಕುವ ಮೂಲಕ ಹೊಸರೂಪ ನೀಡಿದ್ದಾರೆ. ಮಹಿಳೆಯರುಆರ್ಥಿಕವಾಗಿ ಅಭಿವೃದ್ಧಿ ಹೊಂದಲುಬ್ಯೂಟಿಷಿಯನ್ ಮಾರ್ಗ ಸಹಕಾರಿಯಾಗಿದ್ದು,
ಗ್ರಾಹಕರ ಸಂತೃಪ್ತಿಯ ನಮ್ಮ ಧ್ಯೇಯ, ಹೀಗಾಗಿ ಗ್ರಾಹಕರಿ ತೃಪ್ತಿಕರವಾದ ಸೇವೆ ನೀಡಬೇಕು ಎಂದು ಹೇಳಿದರು
ನಂತರ ಮಾತನಾಡಿದ ನಾಗವಲ ದ ಪಂಚಾಯತ್ ಅಭಿವೃದ್ಧಿ ಅಧಿಕಾರ ಡಾ ಶೋಭಾ ರಾಣಿ
21ನೇ ಶತಮಾನದ ವೈಜ್ಞಾನಿಕ ಯುಗದಲ್ಲಿ ಮಹಿಳೆ ಪುರುಷನಷ್ಟೇ ಸಮರ್ಥಳು ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ನಗರ-ಗ್ರಾಮೀಣ ಪ್ರದೇಶವೆನ್ನದೆ ಸೌಂದರ್ಯಪ್ರಜ್ಞೆ ಎಲ್ಲ ವಯೋಮಾನದ ಮಹಿಳೆಯರಲ್ಲಿ ಮೂಡುತ್ತಿದೆ. ಬ್ಯೂಟಿ ಪಾರ್ಲರ್ ಉದ್ಯಮ ಬೇಡಿಕೆಯ ಉದ್ಯಮವಾಗಿದೆ. ಮಹಿಳೆಯರು ಕೂಡ ಯಶಸ್ವಿ ಉದ್ಯಮಿಗಳಾಗಲು ಅವಕಾಶ ಇದೆ ಎಂದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾಕ್ಟರ್ ಆರ್ ಎಚ್ ಪವಿತ್ರ, ಶಿವಮೊಗ್ಗ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ಅಶ್ವಿನಿ ಪಿ ಗೌಡ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ನಾಗವಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ. ಶೋಭಾ ರಾಣಿ, ಮೈಸೂರು ಬ್ಯೂಟಿಷಿಯನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರು ವೇದಾ ರೈ, ಮೈಸೂರು ಬ್ಯೂಟಿಷಿಯನ್ ವೆಲ್ಫೇರ್ ಅಸೋಸಿಯೇಷನ್ ಉಪಾಧ್ಯಕ್ಷರು ಅಹಲ್ಯ, ಮೈಸೂರು ನಗರ ಪೊಲೀಸ್ ಟ್ರಾಫಿಕ್ ವಾರ್ಡನ್ ಮಾಲಿನಿ ಆರ್ ಪಾಲಾಕ್ಷ, ಅಕ್ಕನ ಬಳಗ ಶಾಲೆಯ ಮುಖ್ಯೋಪಾಧ್ಯಾಯರು ಸುಗುಣ, ಶ್ರೀ ದುರ್ಗಾ ಫೌಂಡೇಶನ್ ಉಪಾಧ್ಯಕ್ಷರಾದ ವಿದ್ಯಾ ಹಾಗೂ ಶಾಲೆಯ ಶಿಕ್ಷಕ ವೃಂದ ಹಾಜರಿದ್ದರು