ಮೈಸೂರಿನ ಕೆ.ಆರ್. ಕ್ಷೇತ್ರದ ಶಾಸಕರಿಂದ ಅರಿವು ಮೂಡಿಸುವ ಕಾರ್ಯಕ್ರಮ

ಮೈಸೂರು,

ಕೊರೊನಾ ವೈರಸ್ ಮೈಸೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಜನನಿಬಿಡಾದ ಪ್ರದೇಶದಲ್ಲಿ ಮಾನ್ಯ ಶಾಸಕರಾದ ಎಸ್ ಎ ರಾಮದಾಸ್ ರವರು ಸಾರ್ವಜನಿಕರಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕೆಲಸವನ್ನು ನಗರಪಾಲಿಕೆ ಅಧಿಕಾರಿಗಳು, ಪೋಲಿಸ್ ಇಲಾಖೆ ಮತ್ತು ಆರೋಗ್ಯಇಲಾಖೆಯ ಅಧಿಕಾರಿಗಳೊಂದಿಗೆ ಜೆಪಿನಗರದಲ್ಲಿರುವ ಪುಟ್ಟರಾಜು ಗವಾಯಿ ಕ್ರೀಡಾಂಗಣದಲ್ಲಿ ವ್ಯಾಯಾಮ,ಯೋಗ ಮತ್ತು ವಿವಿಧ ಕ್ರೀಡೆ ಆಡುವವರರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿಯೊಬ್ಬರಿಗೂ ಜ್ವರ ತಪಾಸಣೆ ಹಾಗೂ ಮಾಸ್ಕ್ ಧರಿಸುವಂತೆ ಮನವಿಮಾಡಿ ಹಾಗೂ ಸ್ವಲ್ಪ ದಿನಗಳ ಮಟ್ಟಿಗೆ ಯಾವುದೇ ಉದ್ಯಾನವನ ಮತ್ತು ಕ್ರೀಡಾಂಗಣಕ್ಕೆ ಭೇಟಿ ನೀಡ ಬಾರದೆಂದು ಮನವಿ ಮಾಡಲಾಗುತ್ತದೆ ಹಿಂದೂ ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.