ರಾಜ್ಯದಲ್ಲಿ ಕರೋನಾ ಕಂಟ್ರೋಲ್ ತಪ್ಪಿದೆ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನ ಕಂಟ್ರೋಲ್ ತಪ್ಪಿದೆ ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪಅವರು ಸ್ಪಷ್ಟಪಡಿಸಿದ್ದಾರೆ .ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಿಯಂತ್ರಣ ತಪ್ಪಿರುವ ಸ್ಥಳದಲ್ಲಿ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೆಲವು ಸಂಗತಿಗಳನ್ನು ಕೇಂದ್ರದ ತಂಡ ಪ್ರಶಂಸಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರೋನಾ ಸಂಬಂಧ ನಾಳೆ ಪತ್ರಿಕಾಗೋಷ್ಠಿಯನ್ನು ಕರೆದಿರುವುದಾಗಿ ತಿಳಿಸಿದರು.
ಇಂದು ಸಂಜೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯನ್ನು ಕರೆದಿರುವುದಾಗಿ ಹೇಳಲಾಗಿದೆ.