ಅರ್ನಾಬ್ ಗೋಸ್ವಾಮಿ ಬಂಧನ : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಖಂಡನೆ

444
Share

ಅರ್ನಾಬ್ ಗೋಸ್ವಾಮಿ
ಬಂಧನ :
ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಖಂಡನೆ

ರಿಪಬ್ಲಿಕ್ ಸುದ್ದಿ ವಾಹಿನಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಅವರನ್ನು ಬಂಧಿಸಿರುವ ಮುಂಬೈ ಪೊಲೀಸರ ಕ್ರಮವನ್ನು ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತೀವ್ರವಾಗಿ ಖಂಡಿಸಿದೆ .ಮುಂಬೈನಲ್ಲಿ ಅರ್ನಾಬ್ ಗೋಸ್ವಾಮಿ ನಿವಾಸದಿಂದ ಬುಧುವಾರ ಬೆಳಿಗ್ಗೆ ಬಂಧಿಸಿರುವ ಪೋಲೀಸರ ವರ್ತನೆಯು ತುರ್ತು ಪರಿಸ್ಥಿತಿ ದಿನಗಳಲ್ಲಿ ಮೌಲಿಕ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಂತಿದೆ .ಕಾನೂನು ವಿರುದ್ಧವಾಗಿ ಅರ್ನಾಬ್ ಗೋಸ್ವಾಮಿಅವರನ್ನು ಬಂಧಿಸಿರುವುದು ಇಡೀ ದೇಶದ ಪತ್ರಿಕಾ ಮಾಧ್ಯಮಕ್ಕೆ ಆಘಾತ ಉಂಟು ಮಾಡಿದೆ .ಮಹಾರಾಷ್ಟ್ರದ ಸರ್ಕಾರದ ಈ ಕೃತ್ಯವು ಪತ್ರಿಕಾ ಮಾಧ್ಯಮದ ಸ್ವಾತಂತ್ರ್ಯವನ್ನು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಗಿಸುವ ಷಡ್ಯಂತ್ರವಾಗಿದೆ .ಅರ್ನಾಬ್ ಗೋಸ್ವಾಮಿ ಪಾಲಘರ್ ನಲ್ಲಿ ಸಾಧುಗಳ ಹತ್ಯೆ ನಡೆದ ಬಗೆ ಮತ್ತು ಮಹಾರಾಷ್ಟ್ರದಲ್ಲಿ ನಡೆದ ಅನೇಕ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಕನ್ನಡಿಯಂತೆ ತೋರಿಸಿದ್ದು .ಈ ಎಲ್ಲಾ ಘಟನೆಗಳನ್ನು ವರದಿ ಮಾಡಿರುವುದು ಪ್ರಜಾಪ್ರಭುತ್ವ ಸರ್ಕಾರಕ್ಕೆ ಶೋಭೆ ತರದು. ಅರ್ನಾಬ್ ಗೋಸ್ವಾಮಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಮಹಾರಾಷ್ಟ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳನ್ನು ನಿಲ್ಲಿಸಬೇಕು ಎಂದು ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಆಗ್ರಹಿಸಿದ್ದಾರೆ


Share