ಇ.ಎಸ್.ಐ ಆಸ್ಪತ್ರೆಯಲ್ಲಿರುವ ಈ ಸಮಸ್ಯೆ ಬಗ್ಗೆ ಚರ್ಚೆ

299
Share

ಮೈಸೂರು  19 ರಂದು ಮೈಸೂರಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಅಭಿವೃದ್ಧಿ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ವತಿಯಿಂದ ನಡೆದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸನ್ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಅರಬೈಲ್ ಶಿವರಾಂ ಹೆಬ್ಬಾರ್ ರವರಲ್ಲಿ ಕಾರ್ಮಿಕರ ಕುಂದುಕೊರತೆಗಳ ಕುರಿತು ನಡೆದ ಸಭೆಯಲ್ಲಿ ಇ.ಎಸ್.ಐ ಆಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳ ಬಗ್ಗೆ ವಿಷಯ ಚರ್ಚಿಸಲಾಯಿಗಿತ್ತು. ಚರ್ಚಿಸಿದ ವಿಷಯಗಳಲ್ಲಿ ಒಂದಾದ ಇ.ಎಸ್.ಐ ಆಸ್ಪತ್ರೆಗಳಲ್ಲಿ ಕೆಲವು ಮೂಲಭೂತ ಸೌಕರ್ಯಗಳು ಹಾಗೂ ಉಪಕರಣಗಳ ಕೊರತೆಯಿರುವುದರಿಂದ ಈ ಕುರಿತು ಸೂಕ್ತ ಕ್ರಮ ವಹಿಸಲು ಕೋರಲಾಗಿತ್ತು ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ್ದ ಮಾನ್ಯ ಸಚಿವರು ದಿನಾಂಕ 20.02.2021 ರಂದು ಕಾರಾವಿ ನಿಗಮದಿಂದ ಪಿ.ಐ.ಪಿ 2020-21 ರಡಿಯಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮಂಜೂರಾತಿ ನೀಡಲಾಗಿದ್ದು ಇಲಾಖೆಯ ಕಾರಾವಿ ಅಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹಾಗೂ ಅವಶ್ಯಕ ಕೊರತೆಯಿರುವ ಉಪಕರಣಗಳ ಖರೀದಿ ಕ್ರಮ ಜಾರಿಯಲ್ಲಿರುತ್ತದೆ ಎಂದು ಕಾ.ರಾ.ವಿ.ಯೋ.ವೈ ಸೇವೆಗಳ ನಿರ್ದೇಶಕರು ಸಹಿಯುಳ್ಳ ಪತ್ರವು ನಮ್ಮ ಕಛೇರಿಗೆ ತಲುಪಿದ್ದು ಸಮಸ್ಯೆ ಬಗೆಹರಿಸಲು ತ್ವರಿತವಾಗಿ ಸ್ಪಂದಿಸಿ ಸಾವಿರಾರು ಕಾರ್ಮಿಕರಿಗೆ ಅನುಕೂಲ ಮಾಡಿಕೊಟ್ಟ ಸನ್ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಅರಬೈಲ್ ಶಿವರಾಂ ಹೆಬ್ಬಾರ್ ರವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ.


Share