ಬೆಂಗಳೂರು,
ರಾಜ್ಯದಲ್ಲಿ ಕೋರನಾ ಸಂಕು ಪ್ರಕರಣಗಳು ನಿಯಂತ್ರಣಕ್ಕೆ ತರುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಇಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತುರ್ತು ಸಭೆ ಕರೆದಿದ್ದಾರೆ .
ಇಂದು ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನ 691 ಪ್ರಕರಣಗಳು ಮತ್ತು ಒಂದೇ ದಿನ ಬೆಂಗಳರಿನಲ್ಲಿ 196 ಕೊರೋನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಇಂದು ನಡೆಸುವ ತುರ್ತು ಸಭೆಗೆ ಕಾರಣವಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ ಬಗ್ಗೆ ಸಮಗ್ರವಾಗಿ ಇಂದು ನಡೆಯುವ ಸಭೆಯಲ್ಲಿ ಚರ್ಚೆಯಾಗಲಿದೆ.