ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ : ಮೂರನೇ ಸ್ಥಾನ ಪಡೆದ ರಾಮನಗರ ಜಿಲ್ಲೆ
ರಾಮನಗರ, ): ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ರಾಮನಗರ ಜಿಲ್ಲೆ ರಾಜ್ಯದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿರುತ್ತದೆ. ಈ ಬಾರಿ ಜಿಲ್ಲೆಗೆ ನೀಡಲಾಗುವ ಸ್ಥಾನಗಳನ್ನು ಗುಣಮಟ್ಟದ ಆಧಾರದ ಮೇಲೆ ಮಾಡಲಾಗಿದೆ. ಇದಕ್ಕಾಗಿ ಶ್ರಮಿಸಿದ ಸಾರ್ವಜನಿಕ ಶಿಕ್ಷಣ ಇಲಖೆ ಅಧಿಕಾರಿಗಳು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರನ್ನು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ಅಭಿನಂದಿಸಿದ್ದಾರೆ.
ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕೋವಿಡ್ ಸಾಂಕ್ರಮಿಕ ರೋಗದ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಭಯವಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಪೋಷಕರು ಹಾಗೂ ಮಕ್ಕಳಲ್ಲಿ ಎಲ್ಲಾ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಮಾಡುವುದಾಗಿ ಅರಿವು ಮೂಡಿಸಿ. ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗದAತೆ ಪರೀಕ್ಷೆ ನಡೆಸಿತು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ಇಂದು ಜಿಲ್ಲೆಗೆ ಶೇ ೧೦೦ ರಷ್ಟು ಫಲಿತಾಂಶ ದೊರೆತಿದೆ. ಕೋವಿಡ್ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಂಡು ಸಹಕರಿಸಿದ ಎಲ್ಲಾ ಇಲಾಖೆಗಳನ್ನು ಅಭಿನಂದಿಸುತ್ತೇನೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಅವರು ತಿಳಿಸಿದ್ದಾರೆ.