ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

314
Share

ಮೈಸೂರು-ಮೈಸೂರು ಲೋಕಸಭಾ ಕ್ಷೇತ್ರದ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಸುನಿಲ್ ಟಿ.ಆರ್ ಅವರು ನಾಮಪತ್ರ ಸಲ್ಲಿಸಿದರು

– ಮೈಸೂರು ಲೋಕಸಭಾ ಕ್ಷೇತ್ರದ ಎಸ್‌.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಸುನಿಲ್ ಟಿ ಆರ್ ಅವರು ಇಂದು ರಾಮಸ್ವಾಮಿ ವೃತ್ತದಲ್ಲಿ ಹುತಾತ್ಮ ರಾಮಸ್ವಾಮಿ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಗನ್ ಹೌಸ್ ನವರೆಗೆ ಮೆರವಣಿಗೆ ನಡೆಸಿ ನಂತರ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಎಸ್.ಯು.ಸಿ.ಐ‌ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ರವಿ‌ ಅವರು ಮಾತನಾಡಿ, ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಬೆಲೆ ಏರಿಕೆ, ನಿರುದ್ಯೋಗ, ಬಡತನ ಹೆಚ್ಚಾಗುತ್ತಲೇ ಇದ್ದು, ದುಡಿಯುವ ಜನಗಳು ಸಂಕಷ್ಟದಲ್ಲಿದ್ದಾರೆ. ಪರ್ಯಾಯವಾಗಿ ದುಡಿಯುವ ಜನಗಳ ರಾಜಕೀಯವನ್ನು ಬಲಪಡಿಸಲು ನಾವು ಸ್ಪರ್ಧಿಸುತ್ತಿದ್ದೇವೆ.
ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಬೀಗುವ ಬಿ.ಜೆ.ಪಿ ಪಕ್ಷ ಇಂದು ಈ ದೇಶದ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಇದರ ವಿರುದ್ಧ ಬಲಿಷ್ಟವಾದ ಹೋರಾಟಗಳನ್ನು ಬೆಳೆಸಲು ನಮ್ಮ ಪಕ್ಷವನ್ನು ಚುನಾಯಿಸಿ ಎಂದರು.

ಎಸ್.ಯು.ಸಿ.ಐ‌ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಚಂದ್ರಶೇಖರ್ ಮೇಟಿ ಅವರು ಮಾತನಾಡಿ, ಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಧರ್ಮ ದ ಹೆಸರಿನಲ್ಲಿ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ದಿನೇ ದಿನೇ ಆರೋಗ್ಯ ಖಾಸಗೀಕರಣ, ಶಿಕ್ಷಣದ ವ್ಯಾಪಾರೀಕರಣ, ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ಮಾಡುತ್ತಲೇ ಇದೆ. ಬಿಜೆಪಿ ಅಥವಾ ಕಾಂಗ್ರೆಸ್ ಆಗಲಿ ಯಾವ ಪಕ್ಷವೂ ಜನ ಸಾಮಾನ್ಯರ ಪರವಾಗಿಲ್ಲ. ಜನರ ನೈಜ ಪರ್ಯಾಯ ಎಂದರೆ ಅದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷ. ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಟಿ.ಆರ್ ಸುನಿಲ್ ಅವರು ಕಾಲೇಜು ವಿದ್ಯಾರ್ಥಿ ಆಗಿದ್ದಾಗಿಂದಲೂ ಯುವಜನರ ಹಾಗೂ ಜನ ಸಾಮಾನ್ಯರ ಪರವಾಗಿ ಹೋರಾಟಗಳನ್ನು ಕಟ್ಟಿ ಬೆಳೆಸಿದ್ದಾರೆ. ಹಾಗಾಗಿ ಭ್ರಷ್ಟ ಪಕ್ಷಗಳನ್ನು ಸೋಲಿಸಲು ನಮ್ಮ ಪಕ್ಷವನ್ನು ಬೆಂಬಲಿಸಿ‌ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸೆಕ್ರಟೇರಿಯೇಟ್ ಸದಸ್ಯರಾದ ಎಂ.ಉಮಾದೇವಿ, ಜಿಲ್ಲಾ ಸಮಿತಿ ಸದಸ್ಯರಾದ ಸಂಧ್ಯಾ.ಪಿ.ಎಸ್, ಸೀಮಾ.ಜಿ.ಎಸ್, ವಿ ಯಶೋಧರ್ , ಹರೀಶ್, ಸದಸ್ಯರಾದ ಸುಭಾಷ್, ಚಂದ್ರಕಲಾ, ನೀತುಶ್ರೀ, ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸಿದ್ದರು.

 

 


Share