ಕೆ.ಆರ್ .ಆಸ್ಪತ್ರೆಗೆ ಕಾಯಕಲ್ಪ ನೀಡುವ ಕಾರ್ಯ ನಿರಂತರವಾಗಿ ನಡೆದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಮೈಸೂರು, ಆಗಸ್ಟ್ 29: ಕೆ.ಆರ್ .ಆಸ್ಪತ್ರೆಗೆ ಕಾಯಕಲ್ಪ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಪ್ರಾರಂಭಿಸಿರುವ ಎಂ.ಆರ್.ಐ ಘಟಕ ಹಾಗೂ ಸುಟ್ಟ ಗಾಯಗಳ ನವೀಕೃತ ವಾರ್ಡ್ ನ್ನು ಉದ್ಘಾಟಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
*ಬೇಡಿಕೆ ಪರಿಶೀಲನೆ*
ಪ್ರಸ್ತುತ 1200 ಹಾಸಿಗೆಗಳಿರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಬೇಡಿಕೆ ಇದೆ. ಇದನ್ನು ಸರ್ಕಾರ ಪರಿಶೀಲಿಸಲಿದೆ ಎಂದು ತಿಳಿಸಿದರು.