ಕೊಡಗಿನಲ್ಲಿ ಬಿಜೆಪಿ ಸಮಾವೇಶ

318
Share

*ಕೊಡಗು- ಇಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆಯ ಪ್ರಯುಕ್ತ ಮಡಿಕೇರಿ ನಗರದಲ್ಲಿ ಆಯೋಜಿಸಿದ್ದ ಕೊಡಗು ಜಿಲ್ಲೆ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು .

ಈ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಗಳನ್ನು ತಿಳಿಸಿ ಈ ದಿನ ಮುಮ್ಮಡಿ ಕೃಷ್ಣರಾಜ ಒಡೆಯರ್ ರವರ ಸ್ಮರಣ ದಿನ ದಿನವನ್ನು ನೆನಪಿಸಿಕೊಳ್ಳಲಾಯಿತು.

ಈ ಬಾರಿ ಬಿಜೆಪಿ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿಕೊಂಡು ಬರಬೇಕೆಂದು ಸೂಚಿಸಲಾಯಿತು
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರರವರು ಲೋಕಸಭಾ ಅಭ್ಯರ್ಥಿಯಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಜಿಲ್ಲಾಧ್ಯಕ್ಷರಾದ ರವಿ ಕಾಳಪ್ಪನವರು ಎಂ.ಎಲ್.ಸಿ ಸುಜಾ ಕುಶಾಲಪ್ಪ ರವರು ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ ಸುನಿಲ್ ಸುಬ್ರಹ್ಮಣ್ಯ ರವರು ಹಾಜರಿದ್ದರು.


Share