ಗ್ರಾಮೀಣ ಹಾಡಿ ಜನಾಂಗಕ್ಕೆ ಹೊದಿಕೆ ವಿತರಣಾ ಅಭಿಯಾನ ಅವಧೂತ ದತ್ತ ಪೀಠದಲ್ಲಿ ಗಣಪತಿ ಸಚ್ಚಿದಾನಂದ ಶ್ರೀಗಳಿಂದ ಸಾಮಗ್ರಿ ಬಿಡುಗಡೆ

233
Share

 

 

ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಜೀವಧಾರ ರಕ್ತನಿಧಿ ಕೇಂದ್ರ ವತಿಯಿಂದ ಹಮ್ಮಿಕೊಂಡಿರುವ ನಿರಾಶ್ರಿತರಿಗೆ ಹಾಗೂ ಅಸಹಾಯಕರಿಗೆ ಗ್ರಾಮೀಣ ಪ್ರದೇಶದ ಹಾಡಿ ಜನಾಂಗಕ್ಕೆ ಹೊದಿಕೆ ವಿತರಣಾ ಅಭಿಯಾನದ
ಪ್ರಚಾರ ಸಾಮಗ್ರಿಗಳನ್ನು ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿರವರು ಬಿಡುಗಡೆಗೊಳಿಸಿ
ಶುಭ ಹಾರೈಸಿದರು,

ನಂತರ ಮಾತನಾಡಿದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿರವರು ಸಾಂಸ್ಕೃತಿಕ ನಗರಿ ಎಲ್ಲರಿಗೂ ಆಶ್ರಯ ನೀಡಿದೆ, ಕೆಲವರ ಜೀವನದಲ್ಲಿ ವಿಧಿಯಾಟ ಕೆಲವು ಸನ್ನಿವೇಶಗಳು ನೆಮದಿಯಿಲ್ಲದಿದ್ದಾಗ ಕೆಲವರು ತೊಂದೆರೆಯಲ್ಲಿರುತ್ತಾರೆ, ಮಳೆ ಚಳಿ ಎನ್ನದೇ ಬಸ್ ನಿಲ್ದಾಣ, ರೈಲ್ವೇನಿಲ್ದಾಣ ದೇವಸ್ಥಾನ, ಚಿತ್ರಮಂದಿರ ಸರ್ಕಾರಿ ಕಟ್ಟಡಗಳ ಮುಂಭಾಗ ರಾತ್ರಿಹೊತ್ತು ಆಶ್ರಯಕ್ಕಾಗಿ ರಾತ್ರಿ ಕಳೆಯಲು ಮಲಗಿರುತ್ತಾರೆ ಮೈಸೂರಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ನಿರಾಶ್ರಿತರಿದ್ದು, ಮಾನವೀಯತೆ ದೃಷ್ಟಿಯಿಂದ ಚಳಿ ಮಳೆಯಿಂದ ನಿರಾಶ್ರಿತರ ರಕ್ಷಣೆ ಸಾರ್ವಜನಿಕರ ಹೊಣೆ ಎನ್ನುವ ಸಂಕಲ್ಪದೊಂದಿಗೆ ಅವರಿರುವ ಜಾಗಕ್ಕೆ ಹೋಗಿ ಹೊದಿಕೆ ನೀಡುವ ಕೆ.ಎಂಪಿಕೆ ಟ್ರಸ್ಟ್ ಆಯೋಜಿಸಿರುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು

ನಂತರ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷ ವಿಕ್ರಮ ಅಯ್ಯಂಗಾರ್
ಕಳೆದ ವರ್ಷವೂ ಸಹ 600ಜನ ರಸ್ತೆ ಬದಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ ರಾತ್ರಿ ವೇಳೆ ರೈಲ್ವೆ ನಿಲ್ದಾಣ ,ಸಬರ್ ಬಸ್ ಸ್ಟ್ಯಾಂಡ್ ಸಿಟಿಬಸ್ ಸ್ಟ್ಯಾಂಡ್, ಮಾರುಕಟ್ಟೆ ,ಸೇರಿದಂತೆ 15 ದಿನಕಾಲ ನಿರಂತರವಾಗಿ ಅಭಿಯಾನವನ್ನು ಯಶಸ್ವಿ ಗಳಿಸಿದ್ದೇವೆ,ಅದರಂತೆ ಈ ವರ್ಷವೂ ಸಹ ಬರುವ ಗುರುವಾರ ಡಿಸೆಂಬರ್ 15ರಿಂದ ಜನವರಿ 15ರವರೆಗೂ ಪ್ರತಿದಿನ ರಾತ್ರಿ ವೇಳೆ ರಸ್ತೆ ಬದಿಯಲ್ಲಿ ಮಲಗಿರುವ ಅಸಹಾಯಕರು ಹಾಗೂ ನಿರಾಶ್ರಿತರಿಗೆ 1000 ಹೊದಿಕೆ ವಿತರಿಸಲು ಮುಂದಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು
ಸಾರ್ವಜನಿಕರು ಕೈಜೋಡಿಸಿ ನೆರವು ನೀಡಲು 9880752727 ಸಂಪರ್ಕಿಸಬಹುದು ಎಂದರು

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಜೀವದಾರರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೇಬಲ್ ಮಹೇಶ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್, ರಾಷ್ಟ್ರೀಯ ಹಿಂದೂ ಸಮಿತಿಯ ಅಧ್ಯಕ್ಷ ವಿಕಾಸ್ ಶಾಸ್ತ್ರಿ, ಮಂಜುನಾಥ್, ತೇಜಸ್ ಕೌಶಿಕ್, ಹಾಗೂ ಇನ್ನಿತರರು ಹಾಜರಿದ್ದರು


Share