ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ
370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ 2024ರ ಸೆಪ್ಟೆಂಬರ್ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು ಎಂದು ಆದೇಶ ನೀಡಿದೆ.
ಸಂವಿಧಾನದ 370ನೇ ವಿಧಿ ಕುರಿತಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ಮಾನ್ಯವಾದದ್ದು.
ಜಮ್ಮು ಮತ್ತು ಕಾಶ್ಮೀರದಲ್ಲಿ ಘೋಷಿಸಲಾದ ರಾಷ್ಟ್ರಪತಿ ಆಳ್ವಿಕೆಯ ಸಿಂಧುತ್ವದ ಬಗ್ಗೆ ಅರ್ಜಿದಾರರು ಪ್ರಶ್ನಿಸದ ಕಾರಣ ಆ ಕುರಿತು ತೀರ್ಪು ನೀಡುವ ಅಗತ್ಯವಿಲ್ಲ.
370ನೇ ವಿಧಿಯು ರಾಜ್ಯದಲ್ಲಿ ಉಂಟಾಗಿದ್ದ ಯುದ್ಧದ ಪರಿಸ್ಥಿತಿಯಿಂದಾಗಿ ಜಾರಿಯಾದ ಮಧ್ಯಂತರ ವ್ಯವಸ್ಥೆ. ಅದು ತಾತ್ಕಾಲಿಕ ನಿಬಂಧನೆ ಎಂಬುದು ಒಕ್ಕಣೆಯಲ್ಲಿದೆ.
370 ನೇ ವಿಧಿಯು ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಒಕ್ಕೂಟದೊಂದಿಗೆ ಸಾಂವಿಧಾನಿಕವಾಗಿ ಒಗ್ಗೂಡಿಸುವ ಉದ್ದೇಶವನ್ನು ಹೊಂದಿತ್ತು. ಹಾಗಾಗಿ ರಾಷ್ಟ್ರಪತಿಯವರು ಅದು ಅಸ್ತಿತ್ವದಲ್ಲಿಲ್ಲ ಎಂದು ಘೋಷಿಸುವ ಅಧಿಕಾರ ಹೊಂದಿದ್ದಾರೆ.
ಭಾರತಕ್ಕೆ ಸೇರ್ಪಡೆಯಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಆಂತರಿಕ ಸಾರ್ವಭೌಮತ್ವ ಉಳಿಯುವುದಿಲ್ಲ. ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ.
ಜಮ್ಮು ಮತ್ತು ಕಾಶ್ಮೀರ ಸಾಂವಿಧಾನಿಕ ಸಭೆಯ ಶಿಫಾರಸು ರಾಷ್ಟ್ರಪತಿಗಳಿಗೆ ಅನ್ವಯವಾಗುವುದಿಲ್ಲ.
370 (1) (8) ಕಾಶ್ಮೀರದಲ್ಲಿ ಎಲ್ಲ ನಿಬಂಧನೆಗಳನ್ನು ಅನ್ವಯಿಸಲು ರಾಜ್ಯ ಸರ್ಕಾರದ ಅನುಮತಿ ಪಡೆಯುವ ಅಗತ್ಯವಿಲ್ಲ. ಹಾಗಾಗಿ, ರಾಷ್ಟ್ರಪತಿ ಅವರು ಕೇಂದ್ರ ಸರ್ಕಾರದ ತೀರ್ಮಾನವನ್ನು ಸಮ್ಮತಿಸಿರುವುದು ದುರುದ್ದೇಶದ ಕ್ರಮವಲ್ಲ ಎನ್ನುವುದು ಸರ್ವೋಚ್ಚ ನ್ಯಾಲಯದ ಪ್ರಮುಖ ಅಂಶಗಳಿವೆ.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...