ದಾವಣಗೆರೆ : ದಕ್ಷಿಣ ಕಾಶಿ ಎಂದೇ ಕರೆಯುವ ಹರಿಹರ ನಗರದಲ್ಲಿ ತುಂಗಾಭದ್ರಾ ಆರತಿ ಮಂಟಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಿದರು . ತುಂಗಾಭದ್ರಾ ನದಿಯ ದಡದಲ್ಲಿ 108 ಆರತಿ ಮಂಟಪಗಳಿಗೆ ಶಂಕು ಸ್ಥಾಪನೆಯನ್ನು ಗಂಗಾ ಪೂಜೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು .
ಉತ್ತರ ಭಾರತದ ಉತ್ತರ ಪ್ರದೇಶದ ವಾರಣಾಸಿಯ ಗಂಗಾರತಿ ಕಾರ್ಯಕ್ರಮದಂತೆ ದಕ್ಷಿಣ ಕಾಶಿ ಹರಿಹರದಲ್ಲೂ ತುಂಗಾರತಿ ಕಾರ್ಯಕ್ರಮ ನಡೆಸಲಾಗುತ್ತದೆ . ಈ ಯೋಜನೆಗೆ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವ್ಯ ಮಂಟಪ ಹಾಗೂ ಉದ್ಯಾನವನ ಇಲ್ಲಿನ ತುಂಗಾಭದ್ರ ನದಿಯ ತಟದಲ್ಲಿರುವ ರಾಘವೇಂದ್ರ ಮಠದ ಬಳಿ ನೆರವೇರಿತು . ಪಂಚಮಸಾಲಿ ಪೀಠದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು .
*ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ*
*ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ ಉತ್ತಮ ಅವಕಾಶ ಒದಗಿದೆ: ಸಿ.ಎಂ.ಸಿದ್ದರಾಮಯ್ಯ*
ಕುಮುಟಾ, ಮೇ...