ಮೈಸೂರಿನ ಹೃದಯಭಾಗದಲ್ಲಿರುವ ದೇವರಾಜ ಮಾರುಕಟ್ಟೆಯಲ್ಲಿ ದಿನನಿತ್ಯವೂ ಸಾವಿರಾರು ಜನರು ತಮ್ಮ ಜೀವನೋಪಾಯಕ್ಕಾಗಿ ವ್ಯಾಪಾರ ಮಾಡಿಕೊಂಡಿದ್ದು ಈಗ ಕರೋನಾ ಲಾಕ್ಡೌನ್ ನಿಂದಾಗಿ ಮಾರುಕಟ್ಟೆಯು ಮುಚ್ಚಲ್ಪಟ್ಟಿರುವುದರಿಂದ ವ್ಯಾಪಾರಸ್ಥರು ತುಂಬಾ ಸಂಕಷ್ಟದಲ್ಲಿದ್ದಾರೆ. ಅಲ್ಲಿನ ವ್ಯಾಪಾರಿಗಳ ಕಷ್ಟವನ್ನು ಅರಿತ 23ನೇ ವಾರ್ಡಿನ ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ಪ್ರಮೀಳಾ ಭರತ್ ರವರು ದೇವರಾಜ ಮಾರುಕಟ್ಟೆಯನ್ನು ತೆರೆಯಲು ಅನುಮತಿ ಕೊಡಬೇಕೆಂದು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಯಾದ ಬಗಾದಿ ಗೌತಮ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಹೇಮಂತ್ ಕುಮಾರ್ ಗೌಡ, ಬಿಜೆಪಿ ಮುಖಂಡರಾದ ಭರತ್, ಉಪಸ್ಥಿತರಿದ್ದರು.