ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ರ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಅದರ ಪ್ರಚಾರ ಸಾಮಗ್ರಿಗಳನ್ನು
ಸಬರ್ ಬಸ್ ಸ್ಟ್ಯಾಂಡ್ ಸಮೀಪ ಜೋಯ್ ಅಲುಕಾಸ್ ಜ್ಯುವೆಲರ್ಸ್ ಮುಂಭಾಗ ಸಂಸದರಾದ ಪ್ರತಾಪ್ ಸಿಂಹ ,ಖ್ಯಾತ ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ ,ಮೃಗಾಲಯ ಪ್ರಾಧಿಕಾರ ಅಧ್ಯಕ್ಷರಾದ ಎಲ್ ಆರ್ ಮಹಾದೇವಸ್ವಾಮಿ
ಮನೆಮನೆ ಗೊಂಬೆ ಪ್ರದರ್ಶನ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದರು
ದಸರಾ ಗೊಂಬೆ ಸ್ಪರ್ಧೆಯಲ್ಲಿ ಉಚಿತ ಪ್ರವೇಶ ಇದ್ದು
ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡಂತೆ ಗೊಂಬೆಗಳನ್ನು ಕೂರಿಸಿ ದವರಿಗೆ ಮೊದಲನೇ ಬಹುಮಾನ ಶ್ರೀ ಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲೇ 3000 ರೂ ನಗದು ಹಾಗೂ ಪಾರಿತೋಷಕ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎರಡನೇ ಬಹುಮಾನ 2000 ರೂ ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರ,ಮೂರನೇ ಬಹುಮಾನ 1000ರೂ ನಗದು
ಪಾರಿತೋಷಕ ಹಾಗೂ ಪ್ರಮಾಣಪತ್ರನೀಡಲಾಗುವುದು ಸ್ಪರ್ಧೆಯಲ್ಲಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು
ಕಡೆಯ ದಿನಾಂಕ 14/10/2021 ರ ಒಳಗೆ 9880752727ಈ ದೂರವಾಣಿ ಸಂಖ್ಯೆಗೆ ವಾಟ್ಸ್ ಆ್ಯಪ್ ಮೂಲಕ ಗೊಂಬೆ ಜೋಡಣೆ ಮಾಡಿರುವ ಚಿತ್ರ ಹಾಗೂ 3ನಿಮಿಷದ ವೀಡಿಯೊವನ್ನು ಕಲಿಸಿಕೊಡಬೇಕು ಆನಂತರ ನುರಿತ ತೀರ್ಪುಗಾರರು ಅವರ ನಿವಾಸಕ್ಕೆ ತೆರಳಿ ವೀಕ್ಷಿಸಿ ಸಂಸ್ಕೃತಿ ಇತಿಹಾಸ ಸಾರುವ ಹಾಗೂ ಐತಿಹಾಸಿಕ ಹಿನ್ನಲೆ ಒಳಗೊಂಡ ಅದ್ಭುತವಾಗಿ ಗೊಂಬೆ ಜೋಡಣೆ ಮಾಡಿದಂತಹ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಾರೆ
ಇದೇ ಸಂದರ್ಭದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ,ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ ,ಅಪೂರ್ವ ಸುರೇಶ್ ,ನವೀನ್ ಕೆಂಪಿ, ಹರೀಶ್ ನಾಯ್ಡು ,ಹಾಗೂ ಇನ್ನಿತರರು ಹಾಜರಿದ್ದರು