ನಾಳೆ,ಕರ್ನಾಟಕ ರತ್ನ, ಗೌರವ ಡಾಕ್ಟರೇಟ್ ಪ್ರಧಾನ ಪ್ರಧಾನ

286
Share

ದಿನಾಂಕ 20.03.2022ರ ಭಾನುವಾರದಂದು , ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯದ ಹಿರಿಯ ಶ್ರೇಷ್ಠ ಸಹಕಾರಿಗಳಿಗೆ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ಯವರು “ಕರ್ನಾಟಕ ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಸಮಾರಂಭದಲ್ಲಿ ಕರ್ನಾಟಕ ರತ್ನ, ಗೌರವ ಡಾಕ್ಟರೇಟ್ ಪುರಸ್ಕೃತ ಜನಪ್ರಿಯ ನಟರಾದ ದಿವಂಗತ ಪುನೀತ್ ರಾಜಕುಮಾರ್ ರವರು ಸಹಕಾರ ಕ್ಷೇತ್ರದ ಸುಪ್ರಸಿದ್ಧ ಶೃಂಗ ಸಂಸ್ಥೆಯಾದ ಕೆ. ಎಂ. ಎಫ್ ( ಕರ್ನಾಟಕ ಹಾಲು ಮಹಾಮಂಡಳಿ ) ನ ಬ್ರಾಂಡ್ ಅಂಬಾಸಿಡರ್ ಆಗಿ ಯಾವುದೇ ಫಲಾಫೇಕ್ಷೆ ಇಲ್ಲದೆ ನೀಡಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಮರಣೋತ್ತರ “ಕರ್ನಾಟಕ ಸಹಕಾರ ರತ್ನ” ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿಯನ್ನು ಸ್ವೀಕರಿಸಲು ಆಗಮಿಸಬೇಕೆಂದು ದಿವಂಗತ ಪುನೀತ್ ರಾಜಕುಮಾರ್ ರವರ ಧರ್ಮ ಪತ್ನಿಯಾದ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ರವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರು ಆದ ಜಿ ಟಿ ದೇವೇಗೌಡರು ಖುದ್ದಾಗಿ ಭೇಟಿ ನೀಡಿ ಆಹ್ವಾನಿದರು… ಈ ಸಂದರ್ಭದಲ್ಲಿ ಮಹಾಮಂಡಳದ ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು…


Share