ಪೌರಕಾರ್ಮಿಕರ ಆರೋಗ್ಯ ತಪಾಸಣೆಗೆ ಉಸ್ತುವಾರಿ ಸಚಿವರಿಂದ ಚಾಲನೆ
ಮೈಸೂರು, : ಮೈಸೂರು ಮಹಾನಗರ ಪಾಲಿಕೆ ಹಾಗೂ ಕ್ಲಿಯಾರ್ಮೆಡಿ ರೇಡಿಯಂಟ್ ಆಸ್ಪತ್ರೆ ಸಹಯೋಗದಲ್ಲಿ ಪೌರಕಾರ್ಮಿಕರಿಗೆ ಆಯೋಜಿಸಿದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಪುರಭವನದಲ್ಲಿ ಚಾಲನೆ ನೀಡಿದರು.
ಶಿಬಿರದಲ್ಲಿ ಬಿ.ಪಿ., ಮಧುಮೇಹ, ಇಸಿಜಿ, ದಂತ ಚಿಕಿತ್ಸೆ ಹಾಗೂ ಸಾಮಾನ್ಯ ಆರೋಗ್ಯ ಸ್ಥಿತಿ ತಪಾಸಣೆ ಮಾಡಲಾಯಿತು. ಸುಮಾರು 250 ಪೌರ ಕಾರ್ಮಿಕರು ಆಗಮಿಸಿದ್ದರು.
ಶಾಸಕರಾದ ಎಲ್. ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ, ಮೈಸೂರು ಮಹಾನಗರ ಪಾಲಿಕೆ ವೈದ್ಯಾಧಿಕಾರಿಯಾದ ಡಾ. ನಾಗರಾಜ್ ಹಾಗೂ ಕ್ಲಿಯಾರ್ಮೆಡಿ ರೇಡಿಯಂಟ್ ಆಸ್ಪತ್ರೆಯ ಮುಖ್ಯಸ್ಥರಾದ ಮಂಜುನಾಥ್ ರವರು ಪಾಲ್ಗೊಂಡಿದ್ದರು.