ಮೈಸೂರು:ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೈಸೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚಾರ ಆರಂಭಗೊಂಡಿದ್ದು ಬೆಂಗಳೂರಿನಿಂದ ಮೈಸೂರಿಗೆ ಬೆರಳೆಣಿಕೆಯಷ್ಟು ಅಂದರೆ ಕೇವಲ 63 ಜನ ಮಾತ್ರ ಪ್ರಯಾಣ ಮಾಡಿದ್ದಾರೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಪತ್ರಿಕೆ ಪ್ರತಿನಿಧಿಯೊಂದಿಗೆ ಕಮರ್ಷಿಯಲ್ ಮ್ಯಾನೇಜರ್ ಪ್ರಿಯಾ ಶೆಟ್ಟಿಯವರು ಮಾತನಾಡುತ್ತಾ ಮೈಸೂರಿನಿಂದ ಬೆಂಗಳೂರಿಗೆ ತೆರಳಲು 59 ಮಂದಿ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿವರ ನೀಡಿದರು.ದಾವಣಗೆರೆ ಹಾಸನದಲ್ಲಿ ಬುಕಿಂಗ್ ಆರಂಭವಾಗಿದೆ ಎಂದು ಅವರು ವಿವರ ತಿಳಿಸಿದರು.
*ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ*
ಭಾರತ ಚುನಾವಣಾ ಆಯೋಗವು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮೇ.09 ರಂದು ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮೇ.16 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ....