ಮೈಸೂರು-ಕಾಲೇಜು ಕ್ಯಾಂಪಸ್‌ನಲ್ಲಿಯೂ ಸಹ ಹೆಲ್ಮೆಟ್ ಕಡ್ಡಾಯ–ಜಿಲ್ಲಾಧಿಕಾರಿ

29
Share

ಕಾಲೇಜು ಕ್ಯಾಂಪಸ್‌ನಲ್ಲಿಯೂ ಸಹ ಹೆಲ್ಮೆಟ್ ಕಡ್ಡಾಯ–ಡಾ. ಕೆ ವಿ ರಾಜೇಂದ್ರ
ಮೈಸೂರು,ಜು.25 ಮೈಸೂರಿನಲ್ಲಿರುವ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಾಲೇಜ್ ಕ್ಯಾಂಪಸ್‌ಗಳಲ್ಲಿಯೂ ಸಹ ದ್ವಿಚಕ್ರ ವಾಹನ ಬಳಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದಲ್ಲಿ ಕಾಲೇಜಿನ ಆವರಣದೊಳಗೆ ಪ್ರವೇಶವನ್ನು ನಿರ್ಭಂಧಿಸಬೇಕು. ಕಾಲೇಜು ಆಡಳಿತ ವರ್ಗವು ಕಾನೂನು ಬದ್ದವಾಗಿ ಕ್ರಮ ಕೈಗೊಂಡು ಕಡ್ಡಾಯ ಹೆಲ್ಮೆಟ್ ನೀತಿಯನ್ನು ಅನುಸರಿವಂತೆ ನಿಯಮಾವಳಿಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಸೂಚಿಸಿದರು.
ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಸಂಚಾರಿ ನಿಯಮಗಳನ್ನು ಅನುಸರಿಸದೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಹೆಚ್ಚುತ್ತಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ವಾಹನ ಚಲಿಸುವ ಪ್ರತಿಯೊಬ್ಬ ಸವಾರರು ಕೂಡ ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಧರಿಸುವಂತೆ ಕಾಲೇಜು ಆಡಳಿತ ಮಂಡಳಿಯು ಸೂಚನೆಯನ್ನು ನೀಡಬೇಕು ಎಂದರು.
ಪ್ರತಿಯೊಬ್ಬ ವಾಹನ ಸವಾರರು ಕೂಡ ಎರಡು ಹೆಲ್ಮೆಟ್‌ಗಳನ್ನು ತಮ್ಮ ಜೊತೆ ಇರಿಸಿಕೊಳ್ಳುವಂತೆ ಸೂಚನೆಯನ್ನು ನೀಡಬೇಕು. ಇತ್ತೀಚಿಗೆ ಟಿ. ನರಸೀಪುರದಲ್ಲಿ ನಡೆದ ಅಪಘಾತದ ವಿಚಾರವಾಗಿ ಸಂಬoಧಪಟ್ಟವರ ಮೇಲೆ ಕೇಸ್ ದಾಖಲಿಸಿ ಸರಿಯಾದ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಬೇಕೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ನಂದಿನಿ ಅವರಿಗೆ ತಿಳಿಸಿದರು.
ಟೂರ್ ಟ್ಯಾಕ್ಸಿ ಚಾಲಕರು, ಲಾರಿ ಚಾಲಕರು ಮತ್ತು ಲಾರಿ ಮಾಲೀಕರ ಸಂಘದ ಅಧ್ಯಕ್ಷರುಗಳನ್ನು ಕರೆಸಿ ಸಭೆ ನಡೆಸಿ ರಾತ್ರಿ ವೇಳೆಯಲ್ಲಿ ಸಂಚರಿಸುವ ವಾಹನಗಳು ನಿಯಮಗಳನ್ನು ಪಾಲಿಸುವಂತೆ ಸೂಚಿಸಬೇಕು. ರಾತ್ರಿ ವೇಳೆಯಲ್ಲಿ ಚಲಿಸುವ ವಾಹನಗಳಲ್ಲಿ ತಲಾ ಇಬ್ಬರು ಡ್ರೈವರ್‌ಗಳನ್ನು ಒಳಗೊಂಡoತೆ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.
ಮಹಾನಗರ ಪಾಲಿಕೆಗೆ ಸಂಬoಧಿಸಿದoತೆ ಮಳೆಯಿಂದಾಗಿ ರಸ್ತೆಗಳಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುವುದರಿoದ ರಸ್ತೆಗಳಲ್ಲಿನ ರಸ್ತೆ ಉಬ್ಬುಗಳ ನಿರ್ವಹಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ರಸ್ತೆಗಳಲ್ಲಿ ಸುರಕ್ಷತಾ ನಿಯಮಾವಳಿಗಳನ್ನು ಅಳವಡಿಸಬೇಕು. ಕೆಲವು ಕಾಮಗಾರಿಗಳಿಗೆ ಸಂಬoಧಿಸಿದoತೆ ಮಹಾನಗರ ಪಾಲಿಕೆ ವತಿಯಿಂದ ಆದಷ್ಟು ಬೇಗ ಟೆಂಡರ್‌ಗಳನ್ನು ಕರೆದು ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ನಗರಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬoಧಿಸಿದoತೆ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಮಲ್ಟಿಪಲ್ ಸೈನ್ ಬೋರ್ಡ್ಗಳನ್ನು ಅಳವಡಿಸುವಂತೆ ಮತ್ತು ಕಾಮಗಾರಿ ಸಂದರ್ಭದಲ್ಲಿ ಆಗುವ ಅಪಾಯಕಾರಿ ಘಟನೆಗಳ ಕುರಿತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು


Share