ಮೈಸೂರು ಜಿಲ್ಲೆ ಇಂದು 16 ನಾಮಪತ್ರ ಸ್ವೀಕಾರ

206
Share

 

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023
*ಮೈಸೂರು ಜಿಲ್ಲೆಯಲ್ಲಿ ಇಂದು ಹದಿನಾರು ನಾಮಪತ್ರ ಸ್ವೀಕಾರ*

ಮೈಸೂರು.
210-ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ ವೆಂಕಟೇಶ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
211-ಕೃಷ್ಣರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಪರಮೇಶ್ ನಾಮಪತ್ರ ಸಲ್ಲಿಸಿದ್ದಾರೆ.
212-ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ತಿಮ್ಮಭೋವಿ ಹಾಗೂ ಬೀರೇಶ್ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿರುತ್ತಾರೆ.
216- ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿಯಾಗಿ ಸಂಧ್ಯಾಪಿ.ಎಸ್ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸೋಮ ಸಂದರ್ ಕೆ.ಎಸ್ ನಾಮಪತ್ರ ಸಲ್ಲಿಸಿರುತ್ತಾರೆ.
213-ಹೆಗ್ಗಡದೇವನಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರೂಪ ಎಸ್ ರವರು ನಾಮಪತ್ರ ಸಲ್ಲಿಸಿರುತ್ತಾರೆ.
215-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಎಂ ಎಸ್ ಪ್ರವೀಣ್ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುತ್ತಾರೆ.
219-ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರವಿಕುಮಾರ್ ಎಂ ನಾಮಪತ್ರ ಸಲ್ಲಿಸಿರುತ್ತಾರೆ.
218- ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಂದರ್ ಪ್ರೇಮಕುಮಾರ್, ಜಾತ್ಯತೀತ ಜನತಾದಳ ಪಕ್ಷದಿಂದ ಆಯುಬ್ ಖಾನ್, ಆಮ್ ಆದ್ಮಿ ಪಾರ್ಟಿಯಿಂದ ಧರ್ಮಶ್ರೀ ಹಾಗೂ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ಅಬ್ದುಲ್ ಮಜೀದ್ ಕೆ.ಹೆಚ್ ನಾಮಪತ್ರ ಸಲ್ಲಿಸಿರುತ್ತಾರೆ.
ಟಿ ನರಸೀಪುರ, ಚಾಮರಾಜ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Share