ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದ ಚಾಮುಂಡಿ ಬೆಟ್ಟದ ಕ್ಯಾಂಪಸ್ನಲ್ಲಿ ಅತ್ಯಾಧುನಿಕ ತಾರಾಲಯದ ನಿರ್ಮಾಣವು ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದೆ. ಶ್ರೀಮತಿ ನಿರ್ಮಲ ಸೀತಾರಾಮನ್
ಅವರು ಕಾಸ್ಮಾಲಜಿ ಶಿಕ್ಷಣ ಮತ್ತು ಸಂಶೋಧನಾ-ತರಬೇತಿ ಕೇಂದ್ರ (
) ಯೋಜನೆಗಾಗಿ ತಮ್ಮ ಸಂಸದರ ನಿಧಿಯ 5 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಮತ್ತು ಮಾರ್ಚ್ 2022 ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಕರ್ನಾಟಕದ ಯುವಜನರಲ್ಲಿ ಬಾಹ್ಯಾಕಾಶ ಮತ್ತು ವಿಶ್ವವಿಜ್ಞಾನದ ಬಗ್ಗೆ ಆಸಕ್ತಿಯನ್ನು ಬೆಳೆಸಲು ಡಿಜಿಸ್ಟಾರ್ 7 ತಾರಾಲಯವನ್ನು ಸ್ಥಾಪಿಸುವ ಕಲ್ಪನೆಯಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಎಲ್ಇಡಿ ಗುಮ್ಮಟವನ್ನು ಕೊನಿಕಾ-ಮಿನೋಲ್ಟಾ (ಜಪಾನ್), ಆರ್ಎಸ್ಎ-ಕಾಸ್ಮೊಸ್ (ಫ್ರಾನ್ಸ್), ಮತ್ತು ಮೆಸರ್ಸ್ ಆರ್ಬಿಟ್-ಅನಿಮೇಟ್ (ಇಂಡಿಯಾ) ಕನ್ಸೋರ್ಟಿಯಂ ಅಭಿವೃದ್ಧಿಪಡಿಸುತ್ತಿವೆ. ಎಲ್ಇಡಿ ಡೋಮ್ನ ಅಭಿವೃದ್ಧಿ ಮತ್ತು ಸಿವಿಲ್ ನಿರ್ಮಾಣವು ಪ್ರಸ್ತುತ ನಡೆಯುತ್ತಿದೆ. 8ಕೆ ರೆಸಲ್ಯೂಶನ್ ಹೊಂದಿರುವ ಹೈಟೆಕ್ 15-ಮೀಟರ್ ಎಲ್ಇಡಿ ಗುಮ್ಮಟ ತಾರಾಲಯವು ವಿಶ್ವದ ಮೊದಲ ಗುಮ್ಮಟ ತಾರಾಲಯ ಎಂಬ ಪ್ರಸಿದ್ಧಿಗೆ ಪಾತ್ರವಾಗಲಿದೆ.