ಮೋದಿ ಸರ್ಕಾರದ ಸಾಧನೆ ಗೆಲುವಿಗೆ ಶ್ರೀರಕ್ಷೆ: ರೇಣುಕಾ ರಾಜ್*

358
Share

 

*ಮೋದಿ ಸರ್ಕಾರದ ಸಾಧನೆ ಗೆಲುವಿಗೆ ಶ್ರೀರಕ್ಷೆ: ರೇಣುಕಾ ರಾಜ್*

ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳಾ ಮತದಾರರನ್ನು ಪಕ್ಷಾತೀತವಾಗಿ ಭೇಟಿಯಾಗಿ ಪಕ್ಷದ ಅಭ್ಯರ್ಥಿ ಆರ್ ರಘು ಕೌಟಿಲ್ಯ ಬೆಂಬಲಿಸಲು ಮನವಿ ಮಾಡಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಮಂಡಳಿಯ ರಾಜ್ಯ ನಿರ್ದೇಶಕಿ ರೇಣುಕಾ ರಾಜ್ ಹೇಳಿದರು.

ಮಾತನಾಡಿದ ಅವರು, ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದ ಯೋಜನೆ, ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ ಬಗೆ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಪ್ರಮುಖ ಕಾರಣವಾಗಲಿದೆ’ ಎಂದರು. ‘ಪ್ರಚಾರಕ್ಕೆ ತೆರಳಿದ ಕಡೆಗಳಲ್ಲೆಲ್ಲೂ ಬೆಲೆ ಏರಿಕೆ ಬಗ್ಗೆ ಅಪಸ್ವರ ವ್ಯಕ್ತವಾಗಿಲ್ಲ. ದೇಶಕ್ಕಾಗಿ ಮೋದಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂಬ ಸಕಾರಾತ್ಮಕ ಅಭಿಪ್ರಾಯವೇ ವ್ಯಕ್ತವಾಗಿದೆ’ ಎಂದರು.

‘ಪಕ್ಷದ ಅಭ್ಯರ್ಥಿ ಕಳೆದ ಚುನಾವಣೆಯಲ್ಲಿ ಅಲ್ಪ ಮತದ ಅಂತರದಿಂದ ಸೋತಿದ್ದರು. ಈ ಬಾರಿ ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

-ರೇಣುಕಾ ರಾಜ್
ನಿರ್ದೇಶಕರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯ ಅಭಿವೃದ್ದಿ ನಿಗಮ ಮಂಡಳಿಯ


Share