ಯಾದವಗಿರಿ ಶ್ರೀರಾಮಕೃಷ್ಣ ವಿದ್ಯಾಶಾಲೆ: 8ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

336
Share

ಯಾದವಗಿರಿ ಶ್ರೀರಾಮಕೃಷ್ಣ ವಿದ್ಯಾಶಾಲೆ: 8ನೇ ತರಗತಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ
ಮೈಸೂರು,  ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯಾದವಗಿರಿಯ ಶ್ರೀರಾಮಕೃಷ್ಣ ವಿದ್ಯಾಶಾಲೆಗೆ 8ನೇ ತರಗತಿಗೆ ಸೇರಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ:26-03-2021 ಸಂಜೆ 4ಗಂಟೆಯೊಳಗೆ ಸಲ್ಲಿಸಬಹುದು.
ಪ್ರವೇಶ ಪರೀಕೆಯ್ಷು ನಡೆಯುವ ದಿನಾಂಕ : 25-04-2021 ಭಾನುವಾರ ಬೆಳಿಗ್ಗೆ 11.30 ಗಂಟೆಗೆ ಮೈಸೂರಿನ ಯಾದವಗಿರಿಯಲ್ಲಿರುವ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಡಾ|| ಬಾಬು ಜಗಜೀವನರಾಂ ಭವನ ಕಟ್ಟಡ, ಆದಿಪಂಪ ರಸ್ತೆ ಒಂಟಿ ಕೊಪ್ಪಲು ಪೂರ್ವ, ಬಡಾವಣೆ ಪಡುವಾರಹಳ್ಳಿ, ಮೈಸೂರು-10, ದೂರವಾಣಿ ಸಂಖ್ಯೆ-0821-2520910ಅನ್ನು ಸಂಪರ್ಕಿಸಲು ಮೈಸೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share