ಯುವ ಬಳಗದ ವತಿಯಿಂದ ಮಾಸ್ಕ್ ದಿನಾಚರಣೆ

263
Share

 

ಮನೆಯಿಂದ ಹೊರ ಬಂದಾಗ ಮಾಸ್ಕ್ ಹಾಕಬೇಕೆಂದು ಮಕ್ಕಳಿಗೆ ಸಲಹೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜ್ಯ ನಿರ್ದೇಶಕಿ ರೇಣುಕಾ ರಾಜ್

ಮೈಸೂರು ಯುವ ಬಳಗದ ವತಿಯಿಂದ
ಮಾಸ್ಕ್ ದಿನಾಚರಣೆ ಅಂಗವಾಗಿ ಕೆ ಆರ್ ಎಸ್ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಕಾಲೊನಿಯಲ್ಲಿ ಮಕ್ಕಳಿಗೆ ಮಾಸ್ಕ್ ಹಾಕುವ ಮೂಲಕ ಮಾಸ್ಕ್ ಜಾಗೃತಿ ಮೂಡಿಸಲಾಯಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಾಜ್ಯ ನಿರ್ದೇಶಕರಾದ ರೇಣುಕ ರಾಜ್ ಕೋವಿಡ್ ಮೂರನೇ ಅಳೆ ಮಕ್ಕಳಿಗೆ ವ್ಯಾಪಕ ಹರಡುವ ಸೂಚನೆ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳ ಮೇಲೆ ಸೂಕ್ಷ್ಮವಾಗಿ ಜಾಗೃತರಾಗಿ ನೋಡಿಕೊಳ್ಳುವುದು ಪ್ರಮುಖ ಆದ್ಯ ಕರ್ತವ್ಯ ,
ಮಾಸ್ಕ್ ಧರಿಸುವುದು ಈಗಲೂ ಬಹುಮುಖ್ಯ. ಮಾಸ್ಕ್ ಧರಿಸಿ ಜೀವ ಉಳಿಸಿ. ಜಾಗತಿಕ ಸಮುದಾಯಗಳ ಮೇಲೆ ಕೋವಿಡ್ ಪರಿಣಾಮ ಬೀರುತ್ತಿದೆ. ಸೋಂಕು ಹರಡುವಿಕೆ ತಡೆಗೆ ಸಹಾಯ ಮಾಡಬೇಕಿದೆ’ ಮಾಸ್ಕ್ ಧರಿಸಿ, ಕೈಗಳನ್ನು ತೊಳೆಯುತ್ತಿರಿ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಸಲಹೆ ನೀಡಿದೆ.ಹೌದು..! ಕೋವಿಡ್ ವಿರುದ್ಧ ಹೊರಾಡಲು ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ಜೊತೆ ಆಗಾಗ್ಗೆ ಸಾನಿಟೈಸರ್ ಬಳಕೆ, ಈ ಮೂರು ಅಸ್ತ್ರಗಳು ಪಾಲನೆ ಮಾಡಲೇಬೇಕು. ಅದರಲ್ಲೂ ಮಾಸ್ಕ್ ಅನ್ನುವ ಅಸ್ತ್ರ ಪ್ರಮುಖವಾಗಿದೆ. ಹಾಗಾಗಿ ದೇಶದಲ್ಲಿಯೇ ಯಾರು ಮಾಡದ ರೀತಿಯಲ್ಲಿ
ಕರ್ನಾಟಕ ಸರ್ಕಾರ ಮಾಸ್ಕ್ ಅಭಿಯಾನ ನಡೆಸಿ, ಶೇ 99 ರಷ್ಟು ಯಶಸ್ಸು ಕಂಡಿದೆ.ಮನೆಯಿಂದ ಹೊರ ಬಂದಾಗ ಮಾಸ್ಕ್ ಹಾಕಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಾದ ರೇಣುಕರಾಜ ,ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗರತ್ನ ಗೌಡ ,ಮೈಸೂರು ಯುವ ಬಳಗದ ಅಧ್ಯಕ್ಷರಾದ ನವೀನ್ ,ಪಾಪಣ್ಣ ,ಹಾಗೂ ಇನ್ನಿತರರು ಹಾಜರಿದ್ದರು


Share