ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿ ಮುರ್ಮು ನಾಮಪತ್ರ ಸಲ್ಲಿಕೆ

210
Share

ಹೊಸದಿಲ್ಲಿ : ಜುಲೈ 18 ರಂದು ನಡೆಯಲಿರುವ ಭಾರತದ ರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಲಿದರು. ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ತಮ್ಮ ನಾಮಪತ್ರ ಸಲ್ಲಿಸಲು ಸಂಸತ್ತಿಗೆ ಆಗಮಿಸಿದಾಗ ಸಂಸತ್ತಿನಲ್ಲಿ ಮಹಾತ್ಮ ಗಾಂಧಿ , ಡಾ ಬಿ ಆರ್ ಅಂಬೇಡ್ಕರ್ ಮತ್ತು ಬಿರ್ಸಾ ಮುಂಡಾ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು .
ಎನ್‌ಡಿಎಯ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಆಗಮಿಸಿದರು. ಮುರ್ಮು ಅವರು ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮಪತ್ರ ಸಲ್ಲಿಸುತ್ತಿರುವಾಗ ಅವರಿಗೆ ಬೆಂಬಲ ನೀಡಲು ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ಸಂಸದರು ಉಪಸ್ಥಿತರಿದ್ದರು. ಅವರು ಗುರುವಾರ ಒಡಿಶಾದಿಂದ ರಾಷ್ಟ್ರ ರಾಜಧಾನಿ ತಲುಪಿದರು ಮತ್ತು ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಸಚಿವ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು .


Share