ರೈತ ಮುಖಂಡ- ಜಿ ಮಾದೇಗೌಡ ನಿಧನ

251
Share

ಮಂಡ್ಯ, ರೈತ ನಾಯಕ ಜಿ ಮಾದೇಗೌಡ(92) ನಿಧನ ಹೊಂದಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.
ಮಾದೇಗೌಡರು ನಗರದ ಕೆಎಂ ದೊಡ್ಡಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಾದೇಗೌಡರು ವಯೋಸಹಜ ನಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ, ಎಚ್ ಡಿ ಕುಮಾರಸ್ವಾಮಿ ಗಣ್ಯಾತಿಗಣ್ಯರು ಮೃತರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾದೇಗೌಡರು ಕಾವೇರಿ ನೀರು ಹಂಚಿಕೆ ಹೋರಾಟ ಸಂಬಂಧ ಹಲವಾರು ಬಾರಿ ಜೈಲಿಗೆ ಹೋಗಿ ಬಂದಿದ್ದರು. ಮಂಡ್ಯ ಜಿಲ್ಲೆಯಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಮಂಡ್ಯ ಜಿಲ್ಲೆಯ ರೈತ ಸಂಘದ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ನಾಳೆ ಮಂಡ್ಯ ವಿಶ್ವೇಶ್ವರ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ ಎಂದು ಹೇಳಲಾಗಿದೆ ನಾಳೆ ಮಧ್ಯಾಹ್ನ ಮಾದೇಗೌಡರ ಹುಟ್ಟೂರು ಗುರು ದೇವನಹಳ್ಳಿ ಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿತ್ರಕೃಪೆ ಡೆಕ್ಕನ್ ಹೆರಾಲ್ಡ್


Share