ಶಾಸಕ ರಾಮದಾಸ್ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

158
Share

 

 

ಮೈಸೂರು- ಮುಂಬರುವ  ವಿಧಾನಸಭೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಮೈಸೂರಿನ  ಕೆಆರ್ ಕ್ಷೇತ್ರದ ಹಾಲಿ ಶಾಸಕ ಮಾಜಿ ಸಚಿವ ರಾಮದಾಸ್ ಅವರಿಗೆ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿಲ್ಲ. ಏಕೆ ಮಾಡಿಲ್ಲ ? ಕಾರಣ ಏನು ? ಎಂದು ಅಭಿಮಾನಿಗಳು ಭಾರತೀಯ ಜನತಾ ಪಕ್ಷದ ಕ್ಷೇತ್ರದ ಕಾರ್ಯಕರ್ತರುಗಳು ಶಾಸಕರ ಕಚೇರಿ ಮುಂದೆ ರಾಮದಾಸ್ ಅವರಿಗೆ ಟಿಕೆಟ್ ಘೋಷಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಒಂದು ವೇಳೆ ಭಾರತೀಯ ಜನತಾ ಪಕ್ಷದ ಹೈಕಮಾಂಡ್ ರಾಮದಾಸ್ ಅವರಿಗೆ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, 50,000 ಮತಗಳಿಂದ ಗೆಲ್ಲಿಸುತ್ತೇವೆ ಎಂದು ಹಲವಾರು ಮಹಿಳೆಯರು ಸೇರಿದಂತೆ ಪಕ್ಷದ ಕಾರ್ಯಕರ್ತರು ಬಿಜೆಪಿ ಹೈಕಮಾಂಡಿಗೆ ಎಚ್ಚರಿಕೆ ನೀಡಿದ್ದಾರೆ.

Share