ಮೈಸೂರು- ಯುಗಾದಿ ಹಬ್ಬದ ಪ್ರಯುಕ್ತ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ರೋಧಿ ನಾಮ ಸಂವತ್ಸರದಿಂದ ವಿಶ್ವವಸು ನಾಮ ಸಂವತ್ಸರದವರೆಗೂ ಧಾರ್ಮಿಕ ವಿವರಗಳನ್ನು ಒಳಗೊಂಡ ನೂತನ ಕ್ಯಾಲೆಂಡರ್ ಅನ್ನು ಪ್ರೊ.ಶ್ರೀ ಭಾಷ್ಯಂ ಸ್ವಾಮೀಜಿ ಅವರು ದೇವಸ್ಥಾನದ ಆವರಣದಲ್ಲಿ ಮಂಗಳವಾರ ಬಿಡುಗಡೆ ಮಾಡಿದರು.ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್,
ರಾಜಕೀಯ ಮುಖಂಡ ಪುಟ್ಟರಾಜು,ನಯನಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಕೆ.ಬಿ.ಕುಮಾರ್ ಮತ್ತು ಕುಟುಂಬಸ್ಥರು ಹಾಜರಿದ್ದರು.