*ಸಂಸದೀಯ ಮಂಡಳಿಗೆ ಬಿಎಸ್ವೈ, ಸಂತೋಷ್ : ಹೇಮಾ ನಂದೀಶ್ ಹರ್ಷ*
ಮೈಸೂರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯ ದರ್ಶಿ ಬಿ.ಎಲ್. ಸಂತೋಷ್ ಭಾರತೀಯ ಜನತಾ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ಮಹತ್ವದ ಸ್ಥಾನ ಪಡೆದಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿರುವ ಮೈಸೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ,
ಇದರಿಂದ ಪಕ್ಷಕ್ಕೆ ಭಾರಿ ಬಲಬ೦ದಂತಾಗಿದೆ. ಪಕ್ಷದ ಸಂಘಟನೆಗೆ ಇನ್ನಷ್ಟು ವೇಗ ದೊರೆಯಲಿದೆ ಎಂದು ತಿಳಿಸಿದ್ದಾರೆ.
ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ, ಇಡೀ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿಬೆಳೆಸಿದ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರ ಸುದೀರ್ಘ ರಾಜಕೀಯ ಅನುಭವ, ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಇನ್ನಷ್ಟು ಬಲಗೊಳ್ಳಲಿದೆ. ಯಡಿಯೂರಪ್ಪ ಹಾಗೂ ಬಿ.ಎಲ್.ಸಂತೋಷ್ ಬಿಜೆಪಿಗೆ ಆಧಾರಸ್ತಂಭವಾಗಿ ಇದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ, ನಾಯಕರಾದ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್, ಎಲ್ಲ ಸಚಿವರು ಹಾಗೂ ಪಕ್ಷದ ಪ್ರಮುಖರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿರುವುದು ನಿಶ್ಚಿತವಾಗಿದೆ ಎಂದು ಹೇಮಾ ನಂದೀಶ್ ತಿಳಿಸಿದ್ದಾರೆ.
ಯಡಿಯೂರಪ್ಪ ಹಾಗೂ ಬಿ.ಎಲ್.ಸಂತೋಷ್ ಪಕ್ಷದಲ್ಲಿ ಉನ್ನತ ಸ್ಥಾನಮಾನ ಪಡೆದಿರುವುದಕ್ಕೆ ಇಡೀ ನಮ್ಮ ಮಹಿಳಾ ಮೋರ್ಚ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಹಾಗೂ ಇವರನ್ನು ಆಯ್ಕೆ ಮಾಡಿದಂತಹ ರಾಷ್ಟ್ರೀಯ ನಾಯಕರಿಗು ಧನ್ಯವಾದ ಸಲ್ಲಿಸುತ್ತೇನೆ
ಇಂತಿ ತಮ್ಮ ವಿಶ್ವಾಸಿ
ಹೇಮಾ ನಂದೀಶ್
ಅಧ್ಯಕ್ಷರು
ಮೈಸೂರು ನಗರ ಮಹಿಳಾ ಮೋರ್ಚಾ