ಸದ್ಗುರು ಜಗ್ಗಿ ವಾಸುದೇವ್ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

80
Share

ದೆಹಲಿ-ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ್ ಅವರು “ಮಾರಣಾಂತಿಕ” ಆರೋಗ್ಯ ತುರ್ತು ಪರಿಸ್ಥಿತಿ ಎದುರಿಸಿದ್ದು , ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಶಾ ಫೌಂಡೇಶನ್ ಬುಧವಾರ ಪ್ರಕಟಿಸಿದೆ. ತಮ್ಮ 66 ವರ್ಷದ ನಾಯಕ ಚೇತರಿಸಿಕೊಳ್ಳುತ್ತಿದ್ದು, ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಮಾರ್ಚ್ 15 ರಂದು ಸದ್ಗುರುಗಳಿಗೆ MRI ಸ್ಕ್ಯಾನ್ ಮಾಡಲಾಗಿದ್ದು, ಮೆದುಳಿನಲ್ಲಿ ಭಾರೀ ರಕ್ತಸ್ರಾವ ಕಂಡುಬಂದಿತ್ತು ಎಂದು ಇಶಾ ಫೌಂಡೇಶನ್ ಹೇಳಿಕೆಯಲ್ಲಿ ಉಲ್ಲೇಖಿಸಿದೆ.
ಕಳೆದ ಮೂರು ವಾರಗಳಿಂದ ತಲೆ ನೋವಿನಿಂದ ಬಳಲುತ್ತಿದ್ದರೂ ಶಿವರಾತ್ರಿ, ಹಾಗೂ ಇತರ ಪೂರ್ವ ನಿಯೋಜಿತ ಕಾರ್ಯಕ್ರಮಗಳಿದ್ದಿದ್ದರಿಂದ ಅವರು ಚಿಕಿತ್ಸೆ ತೆಗೆದುಕೊಳ್ಳಲು ಪರಿಗಣಿಸಿರಲಿಲ್ಲ ಎಂದೂ ಸಂಸ್ಥೆ ತಿಳಿಸಿದೆ.


Share