ಹಿಜಬ್ ವಿಚಾರಣೆ ಸೋಮವಾರಕ್ಕೆ ಮುಂದೂಡಲಾಗಿದೆ . ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ . ಮಧ್ಯಂತರ ಆದೇಶವನ್ನು ನೀಡಲು ಬಯಸುತ್ತೇವೆ ಎಂದು ತ್ರಿಸದಸ್ಯ ಪೀಠವು ತಿಳಿಸಿದೆ . ಶಾಲಾ ಕಾಲೇಜು ಆರಂಭಿಸಲು ಸರ್ಕಾರಕ್ಕೆ ನ್ಯಾಯಾಲಯವು ಸೂಚಿಸಿದೆ .
ಸೋಮವಾರದಿಂದ ಪ್ರತಿದಿನ ತ್ರಿ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ . ಅಂತಿಮ ತೀರ್ಪು ಬರುವ ತನಕ ಯಾವುದೇ ಧಾರ್ಮಿಕ ಉಡುಗೆ ಗೆ ಅವಕಾಶ ಇಲ್ಲ ಎಂದು ತಿಳಿಸಿದೆ .
ಹಿಜಾಬ್ ಸಂಘರ್ಷ ಕುರಿತು ತ್ರಿಸದಸ್ಯ ಪೀಠದ ನ್ಯಾಯಮೂರ್ತಿಗಳು ವಾದ ವಿವಾದಗಳನ್ನು ಆಲಿಸಿದ ನಂತರ ಸದ್ಯಕ್ಕೆಸೋಮವಾರದವರೆಗೆ ಮುಂದೂಡಿದ್ದು ಪ್ರತಿದಿನ ಅಂತಿಮ ತೀರ್ಪು ಬರುವವರೆಗೂ ಚರ್ಚೆ ನಡೆಸಲಿದೆ ಅಲ್ಲಿಯವರೆಗೂ ಶಿಕ್ಷಣ ಸಂಸ್ಥೆಗಳು ಎಂದಿನಂತೆ ನಡೆಯಬೇಕು ಹಾಗೂ ಯಾವುದೇ ಧಾರ್ಮಿಕ ಉಡುಗೆಗಳನ್ನು ತೊಡುವಂತಿಲ್ಲ ಎಂದು ಮುಖ್ಯನ್ಯಾಯಮೂರ್ತಿ ತಿಳಿಸಿದ್ದಾರೆ. ಆದಷ್ಟು ಬೇಗ ತೀರ್ಪು ನೀಡಲಾಗುವುದು ಎಂದು ಸಹ ತಿಳಿಸಿದ್ದಾರೆ .
ಹೈಕೋರ್ಟ್ನ ಮುಖ್ಯನ್ಯಾಯಮೂರ್ತಿ ರಿತುರಾಜ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನಿಸಾ ರವರುಗಳನ್ನು ಒಳಗೊಂಡಂಥ ತ್ರಿಸದಸ್ಯ ಪೀಠ ಈ ತೀರ್ಮಾನಕ್ಕೆ ಬಂದಿದೆ.
53ನೇ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಕುರಿತಂತೆ.
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು, ಗ್ಲೋಬಲ್ ಬ್ರಾಹ್ಮಿನ್ಸ್ ಫೌಂಡೇಷನ್ ಹಾಗೂ ಸಪ್ತಪದಿ ಫೌಂಡೇಷನ್ ಟ್ರಸ್ಟ್ (ರಿ) ಸಹಯೋಗದಲ್ಲಿ ದಿನಾಂಕ 19-05-24ರ ಭಾನುವಾರ ಬೆಳಗ್ಗೆ 9:00 ರಿಂದ...