ಮೈಸೂರು. ಮೈಸೂರು ಬೆಂಗಳೂರು ನಡುವೆ ಹೊಸ ದಶಪಥ ರಸ್ತೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಪ್ರವೇಶ ಇರುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದರು. ಅವರು ಇಂದು ಬೆಳಗ್ಗೆ ಜಲದರ್ಶಿನಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ದಶಪಥ ರಸ್ತೆಯಲ್ಲಿ ಅಪಘಾತ ರಹಿತ ಇರುವಂತೆ (ಆಕ್ಸಿಡೆಂಟ್ ಫ್ರೀ) ರಸ್ತೆ ಮಾಡುವ ಉದ್ದೇಶದಿಂದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗುತ್ತದೆ ಎಂದರು. ಅವರು ಮುಂದುವರೆದು ಮಾತನಾಡುತ್ತ ಸರ್ವಿಸ್ ರಸ್ತೆ ಆಗುವವರೆಗೆ ದಶಪಥ ರಸ್ತೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ಅವಕಾಶ ನೀಡಲಾಗುತ್ತದೆ ಎಂದರು. ಸರ್ವೇಸ್ ರಸ್ತೆ ನಿರ್ಮಾಣವಾದ ನಂತರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು