14/03/2022 ರ ಸರ್ಕಾರಿ ಅರ್ಜಿ ಆಹ್ವಾನ

196
Share

ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ
ಮೈಸೂರು – ಕೃಷಿ ಇಲಾಖೆಯ ವತಿಯಿಂದ ಆತ್ಮ ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ನೇಮಕಾತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗೆ ಕೃಷಿ ಸಂಬAಧಿತ ವಿಷಯಗಳಲ್ಲಿ ಸ್ನಾತಕೊತ್ತರ ಪದವಿ ಹೊಂದಿರುವುದರ ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕಾಗಿದ್ದು, ಮಾಸಿಕ ವೇತನ 30,000 ರೂ.ಗಳನ್ನು ನಿಗದಿ ಪಡಿಸಲಾಗಿದೆ.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಗೆ ಕೃಷಿ ಹಾಗೂ ಕೃಷಿ ಸಂಬAಧಿತ ವಿಷಯಗಳಲ್ಲಿ ಪದವಿ ಮತ್ತು ಸ್ನಾತಕೊತ್ತರ ಪದವಿ ಹೊಂದಿರಬೇಕು ಮಾಸಿಕ ವೇತನ 25,000 ರೂ.ಗಳು ಕೃಷಿ ಸಂಬAಧಿತ ಚಟುವಟಿಕೆಗಳಲ್ಲಿ 2 ವರ್ಷಗಳ ಕ್ಷೇತ್ರಮಟ್ಟದ ಅನುಭವ ಕಡ್ಡಾಯವಾಗಿರುತ್ತದೆ.
ಅರ್ಜಿಯನ್ನು 2022ರ ಮಾರ್ಚ್ 21 ರೊಳಗಾಗಿ ಅರ್ಜಿಯನ್ನು ಪಡೆದು ಪೂರ್ಣ ಮಾಹಿತಿಯೊಂದಿಗೆ 2022ರ ಮಾರ್ಚ್ 28ರಂದು ಸಂಜೆ 5 ಗಂಟೆಯ ಒಳಗಾಗಿ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ ಹಾಗೂ ನೋಂದಣಿ ಅಂಚೆ ಮೂಲಕ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸಾರ್ವಜನಿಕ ಕಛೇರಿಗಳ ಕಟ್ಟಡ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಆತ್ಮ ವಿಭಾಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಉಪ ಯೋಜನಾ ನಿರ್ದೇಶಕರು(ಆತ್ಮ), ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಇವರುಗಳನ್ನು ಸಂಪರ್ಕಿಸುವುದು ಎಂದು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share