ನವ ದೆಹಲಿ:
ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ವಿಶ್ವ ನಾಯಕರಿಗಾಗಿ ಶನಿವಾರ ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ಡಿ ದೇವೇಗೌಡ ಅವರು “ಆರೋಗ್ಯ ಕಾರಣಗಳಿಂದ” ಭಾಗವಹಿಸುವುದಿಲ್ಲ ಎಂಫು ಖಚಿತ ಪಡಿಸಿದ್ದಾರೆ.
ವಿಪಕ್ಷಗಳ ಆಡಳಿತವಿರುವ ರಾಜ್ಯಗಳು ಸೇರಿದಂತೆ ಮಾಜಿ ಪ್ರಧಾನಿಗಳು ಮತ್ತು ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶ್ರೀ ಮನಮೋಹನ್ ಸಿಂಗ್ ಮತ್ತು ಶ್ರೀ ದೇವೇಗೌಡ ಇಬ್ಬರೂ ಔತಣಕೂಟದಲ್ಲಿ ಭಾಗವಹಿಸಲು ತಮ್ಮ ಅಸಮರ್ಥತೆಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ. “ಜಿ 20 ಶೃಂಗಸಭೆಗೆ ಭವ್ಯವಾದ ಯಶಸ್ಸು ಸಿಗಲಿ ಎಂದು ಬಯಸುತ್ತೇನೆ” ಎಂದು ಶ್ರೀ ಗೌಡ ತಿಳಿಸಿದ್ದಾರೆ.
ತೃಣಮೂಲ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಮಾರಂಭದಲ್ಲಿ ತಮ್ಮ ಉಪಸ್ಥಿತಿಯನ್ನು ಖಚಿತಪಡಿಸಿದ್ದಾರೆ. ಮೂಲಗಳ ಪ್ರಕಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಜಿ20 ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಸೆಪ್ಟೆಂಬರ್ 9 ರಂದು ರಾಷ್ಟ್ರ ರಾಜಧಾನಿಗೆ ರಾಷ್ಟ್ರಪತಿಯವರ ಔತಣಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳಬಹುದು ಎಂಬ ವರದಿಗಳೂ ಇವೆ.
ಏತನ್ಮಧ್ಯೆ, ಕೇಂದ್ರ ಸಚಿವ ಸ್ಥಾನಕ್ಕೆ ಸಮಾನವಾದ ಮತ್ತು ಸಾಂವಿಧಾನಿಕ ಸ್ಥಾನವನ್ನು ಹೊಂದಿರುವ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
“ಭಾರತದ ಜನಸಂಖ್ಯೆಯ 60 ಪ್ರತಿಶತದಷ್ಟು ನಾಯಕರನ್ನು ಆಡಳಿತ ಪಕ್ಷ ಗೌರವಿಸುವುದಿಲ್ಲ ಎನ್ನುವುದು ನಿಮಗೆ ಹೇಳುತ್ತದೆ. ಮತ್ತು ಇದು ಜನರು ಯೋಚಿಸಬೇಕಾದ ವಿಷಯವಾಗಿದೆ. ಅವರು ಹಾಗೆ ಏಕೆ ಮಾಡಬೇಕೆಂದು ಭಾವಿಸುತ್ತಾರೆ ಮತ್ತು ಅದರ ಹಿಂದೆ ಯಾವ ರೀತಿಯ ಆಲೋಚನೆ ಇದೆ ಎಂಬದನ್ನು ನೀವೆ ಯೋಚಿಸಿ” ಎಂದು ಬ್ರಸೆಲ್ಸ್ನಲ್ಲಿ ರಾಹುಲ್ ಗಾಂಧಿಯವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸೆದ್ದಾರೆ.
Ms ಬ್ಯಾನರ್ಜಿ ಅವರು ಶುಕ್ರವಾರ ಮಧ್ಯಾಹ್ನ G20 ಔತಣಕೂಟದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಅವರು ರಾಷ್ಟ್ರ ರಾಜಧಾನಿಯಲ್ಲಿ ತಂಗುವ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದ್ದಾರೆ.
ಆದರೆ, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ, ಛತ್ತೀಸ್ ಗಢ ಮತ್ತು ರಾಜಸ್ಥಾನದ ಮುಖ್ಯಮಂತ್ರಿಗಳು ಹಾಜರಾಗುವ ಸಾಧ್ಯತೆ ಕಡಿಮೆ. ಔತಣಕೂಟದಲ್ಲಿ ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಉಪಸ್ಥಿತಿಯ ಬಗ್ಗೆ ಯಾವುದೇ ದೃಢೀಕರಣ ಲಭ್ಯವಿಲ್ಲ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರಪತಿಗಳ ಜಿ20 ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಅಧ್ಯಕ್ಷೆ ಮುರ್ಮು ಅವರು ವಿಶ್ವ ನಾಯಕರ ಜಿ20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಶನಿವಾರ ಔತಣಕೂಟವನ್ನು ಆಯೋಜಿಸಿದ್ದಾರೆ.
ಹೊಸ ಜಾಗತಿಕ ಸಮೀಕ್ಷೆಯೊಂದರ ಪ್ರಕಾರ, ಸಿಂಗಾಪುರ ಮತ್ತು ಜ್ಯೂರಿಚ್ ಈ ವರ್ಷ ವಾಸಿಸಲು ವಿಶ್ವದ ಅತ್ಯಂತ ದುಬಾರಿ ನಗರಗಳಾಗಿ ಇವೆರೆಡು ನಗರಗಳು ನ್ಯೂಯಾರ್ಕ್ ಅನ್ನು ಮೀರಿಸಿದೆ ಎಂದು ತಿಳಿಸುತ್ತದೆ.
ಎಕನಾಮಿಸ್ಟ್ ಇಂಟೆಲಿಜೆನ್ಸ್ ಯುನಿಟ್ನ ವರ್ಲ್ಡ್ವೈಡ್...