MP ಸ್ನ್ಯಾಕ್ಸ್ : ತ್ರಿವಳಿ ಸಂಗಮ

240
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಕಿರೀಟ ಇದೆ ರಾಜ ಅಲ್ಲ
ಕಾಲ ತಿಳಿಸುತ್ತೆ ಗಡಿಯಾರವಲ್ಲ
ಹಾಗಾದರೆ ನಾನು ಯಾರು ?

* ಗಾದೆ :
ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು

* ರಸಪ್ರಶ್ನೆ :
ಭಾರತದ ಕೊನೆಯ ಗೌರ್ನರ್ ಜನರಲ್ ಯಾರು ?

* ಉತ್ತರ
ಒಗಟು – ಹುಂಜ
ರಸಪ್ರಶ್ನೆ – ಸಿ. ರಾಜಗೋಪಾಲಾಚಾರಿ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share