MP ಸ್ನ್ಯಾಕ್ಸ್ : ತ್ರಿವಳಿ ಸಂಗಮ – 71

227
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 71

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು :
ಬಿಳಿ ಜನರಿಗೆ ಕಪ್ಪು ಟೋಪಿ

* ಗಾದೆ :
ಹೊಸ ನೀರು ಬಂದಾಗ ಹಳೆ ನೀರು ಕೊಚ್ಚಿಕೊಂಡು ಹೋಯಿತಂತೆ .

* ರಸಪ್ರಶ್ನೆ :
ಬಾಲಗಂಗಾಧರ ತಿಲಕರು ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು ಎಂಬ ಘೋಷಣೆಯನ್ನು ನೀಡಿದ್ದು ಯಾವ ಊರಿನಲ್ಲಿ ?

* ಉತ್ತರ :
ಒಗಟು –
ಬೆಂಕಿಕಡ್ಡಿ
ರಸಪ್ರಶ್ನೆ –
ಬೆಳಗಾವಿಯಲ್ಲಿ

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share