MP ಸ್ನ್ಯಾಕ್ಸ್ : ತ್ರಿವಳಿ ಸಂಗಮ – 74

207
Share

ತ್ರಿವಳಿ ಸಂಗಮ : ಒಗಟು, ಗಾದೆ ಹಾಗೂ ರಸಪ್ರಶ್ನೆ – 74

ಪುರಾತನ ಕಾಲದಿಂದಲೂ ಒಗಟುಗಳು ಹಾಗೂ ಗಾದೆಗಳು ಜನಜನಿತವಾದ ಅನುಭವಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಿರಿಯರು ಹೇಳುವ ಹಾಗೆ ಗಾದೆಗಳು ಎಂದು ಸುಳ್ಳಾಗುವುದಿಲ್ಲ. ತಾತ, ಅಜ್ಜಿ, ತಂದೆ, ತಾಯಿ ಹಾಗೂ ಹಿರಿಯರು ತಮ್ಮ ಮನೆಗಳಲ್ಲಿ ಮಕ್ಕಳು ಮಾಡಿದ ತಪ್ಪನ್ನು ತಿದ್ದಲು ಗಾದೆಗಳನ್ನು ಉದಾಹರಣೆಯಾಗಿ ಕೊಟ್ಟು ಅವರಿಗೆ ಚೆನ್ನಾಗಿ ಮನವರಿಕೆಯಾಗುವಂತೆ ಮಾಡುತ್ತಿದ್ದರು.
ಎಲ್ಲರೂ ಓದಿ ಆನಂದಿಸಿ ಮುಂದೆ ಬರುವ ನಿಮ್ಮ ಮಕ್ಕಳು ಮೊಮ್ಮಕ್ಕಳಿಗೂ ತಿಳಿಸಿ.

* ಒಗಟು
ಅಕ್ಕಾ ಅತ್ತರೆ ತಂಗೀನೂ ಅಳ್ತಾಳೆ

* ಗಾದೆ :
ದನಕ್ಕೆ ಮೇವಿಲ್ಲ ,ಜನಕ್ಕೆ ಅನ್ನವಿಲ್ಲ

* ರಸಪ್ರಶ್ನೆ :
ಕರ್ನಾಟಕದಲ್ಲಿ ಹೆಚ್ಚು ಭತ್ತ ಬೆಳೆಯುವ ಜಿಲ್ಲೆ ಯಾವುದು ?

* ಉತ್ತರ :
ಒಗಟು –
ಕಣ್ಣು
ರಸಪ್ರಶ್ನೆ –
ರಾಯಚೂರು

* ಸಂಗ್ರಹ
ಟಿ.ವಿ.ಪದ್ಮ ಶೇಖರ್
ಮೇಲುಕೋಟೆ


Share